<p><strong>ನೆಲ್ಯಾಡಿ</strong> (ಉಪ್ಪಿನಂಗಡಿ): ‘ಸಾವು– ಬದುಕಿನ ನಡುವಿನ ಸಂಕಷ್ಟದ ಕ್ಷಣಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವ ಸೇವೆಯಲ್ಲಿ ತೊಡಗಿರುವ ಆಂಬುಲೆನ್ಸ್ ಚಾಲಕರ ಸೇವೆ ಅಮೂಲ್ಯವಾದದ್ದು. ಸಮಾಜವು ಅವರ ತ್ಯಾಗ, ಸೇವೆಯನ್ನು ಗೌರವಿಸಬೇಕು’ ಎಂದು ಧರ್ಮಗುರು ಫಾ. ಶಾಜಿ ಮ್ಯಾಥ್ಯು ಹೇಳಿದರು.</p>.<p>ಇಲ್ಲಿನ ಸೇಂಟ್ ಅಲ್ಫೋನ್ಸ ಚರ್ಚ್ ಎಸ್.ಎಂ.ವೈ.ಎಂ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಆಂಬುಲೆನ್ಸ್ ಚಾಲಕರಾದ ಪಿ. ಮೊಹಮ್ಮದ್ ಮಸೂದ್, ಅಬ್ದುಲ್ ಸಮದ್, ಪ್ರಜ್ವಲ್ ಪಿ.ಜೆ. ಅವರನ್ನು ಸನ್ಮಾನಿಸಲಾಯಿತು.</p>.<p>ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮ್ಯಾಥ್ಯು, ಯುವಜನ ಸಂಘದ ದಿಶಾ, ಜಿತು, ಕ್ರೆಡಿಟ್ ಯೂನಿಯನ್ನ ಶಿಬು, ವಿನ್ಸೆಂಟ್ ಡಿಪೌಲ್ ಸಂಘದ ಸಣ್ಣಿ ಭಾಗವಹಿಸಿದ್ದರು. ಜಿನೋಜ್ ಸ್ವಾಗತಿಸಿದರು. ಬೆರಿಲ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-29-1648952750</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲ್ಯಾಡಿ</strong> (ಉಪ್ಪಿನಂಗಡಿ): ‘ಸಾವು– ಬದುಕಿನ ನಡುವಿನ ಸಂಕಷ್ಟದ ಕ್ಷಣಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವ ಸೇವೆಯಲ್ಲಿ ತೊಡಗಿರುವ ಆಂಬುಲೆನ್ಸ್ ಚಾಲಕರ ಸೇವೆ ಅಮೂಲ್ಯವಾದದ್ದು. ಸಮಾಜವು ಅವರ ತ್ಯಾಗ, ಸೇವೆಯನ್ನು ಗೌರವಿಸಬೇಕು’ ಎಂದು ಧರ್ಮಗುರು ಫಾ. ಶಾಜಿ ಮ್ಯಾಥ್ಯು ಹೇಳಿದರು.</p>.<p>ಇಲ್ಲಿನ ಸೇಂಟ್ ಅಲ್ಫೋನ್ಸ ಚರ್ಚ್ ಎಸ್.ಎಂ.ವೈ.ಎಂ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಆಂಬುಲೆನ್ಸ್ ಚಾಲಕರಾದ ಪಿ. ಮೊಹಮ್ಮದ್ ಮಸೂದ್, ಅಬ್ದುಲ್ ಸಮದ್, ಪ್ರಜ್ವಲ್ ಪಿ.ಜೆ. ಅವರನ್ನು ಸನ್ಮಾನಿಸಲಾಯಿತು.</p>.<p>ಮಾತೃವೇದಿಕೆ ಅಧ್ಯಕ್ಷೆ ಸುಜಾ ಜೇಮ್ಸ್, ಸಿಸ್ಟರ್ ಲಿಸ್ ಮ್ಯಾಥ್ಯು, ಯುವಜನ ಸಂಘದ ದಿಶಾ, ಜಿತು, ಕ್ರೆಡಿಟ್ ಯೂನಿಯನ್ನ ಶಿಬು, ವಿನ್ಸೆಂಟ್ ಡಿಪೌಲ್ ಸಂಘದ ಸಣ್ಣಿ ಭಾಗವಹಿಸಿದ್ದರು. ಜಿನೋಜ್ ಸ್ವಾಗತಿಸಿದರು. ಬೆರಿಲ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-29-1648952750</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>