ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಟ್ಟಣ: ಭೀಕರ ಅಪಘಾತ–ನಾಲ್ವರು ಸಾವು

Last Updated 18 ಏಪ್ರಿಲ್ 2023, 12:02 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ನೆಟ್ಟಣ ಸಮೀಪ ತೂಫಾನ್‌ ವಾಹನ ಮತ್ತು ಆಲ್ಟೊ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಮಂಗಳವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಒಂದು ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸುಬ್ರಹ್ಮಣ್ಯ– ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತ ಆಲ್ಟೊ ಕಾರಿನಲ್ಲಿದ್ದ ಇಬ್ಬರು ಪುರುಷರು, ಒಬ್ಬ ಮಹಿಳೆ ಮತ್ತು ಒಂದು ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಮೃತರು ಬೇಲೂರು ಮೂಲದವರು. ಅವರ ವಿವರಗಳನ್ನು ಇನ್ನಷ್ಟೇ ಕಲೆಹಾಕಬೇಕಿದೆ. ಆಲ್ಟೊ ಕಾರು ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿತ್ತು ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಿಂದ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT