<p><strong>ಬಂಟ್ವಾಳ (ದಕ್ಷಿಣ ಕನ್ನಡ):</strong> ಇಲ್ಲಿನ ಬಿ.ಸಿ.ರೋಡ್ ಸಮೀಪದ ತಲಪಾಡಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ನವವಿವಾಹಿತೆ ಸಾವಿಗೀಡಾಗಿದ್ದಾರೆ.</p>.<p>ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಅವರ ಪತ್ನಿ ಮಾನಸ (23) ಸಾವಿಗೀಡಾದವರು. ಗಂಭೀರವಾಗಿ ಗಾಯಗೊಂಡ ಅನಿಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ದಂಪತಿ ಪ್ರಯಾಣಿಸುತ್ತಿದ್ದ ಆಲ್ಟೊ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ಇನ್ನೊಂದು ಬದಿಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಸಾರಿಗೆ ನಿಗಮದ ಬಸ್ಸಿಗೆ ಕಾರು ಬಡಿದಿದೆ.</p><p>ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಾನಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.</p><p>ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಆಯಿತು.</p><p>ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ಆಗಿತ್ತು. ಮದುವೆಯಾದ ದೇಂತಡ್ಕ ದೇವಸ್ಥಾನಕ್ಕೆ ದಂಪತಿ ಶನಿವಾರ ಭೇಟಿ ನೀಡಿ ಮಾವನ ಮನೆಗೆ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.</p><p>ದಂಪತಿ ಮಂಗಳೂರಿನ ಖಾಸಗಿ ಕಂಪೆನಿಯೊಂದರ ಉದ್ಯೋಗಿಗಳು. ಮೆಲ್ಕಾರ್ ಸಂಚಾರಿ ಠಾಣೆ ಪೋಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ (ದಕ್ಷಿಣ ಕನ್ನಡ):</strong> ಇಲ್ಲಿನ ಬಿ.ಸಿ.ರೋಡ್ ಸಮೀಪದ ತಲಪಾಡಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ನವವಿವಾಹಿತೆ ಸಾವಿಗೀಡಾಗಿದ್ದಾರೆ.</p>.<p>ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಅವರ ಪತ್ನಿ ಮಾನಸ (23) ಸಾವಿಗೀಡಾದವರು. ಗಂಭೀರವಾಗಿ ಗಾಯಗೊಂಡ ಅನಿಶ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ದಂಪತಿ ಪ್ರಯಾಣಿಸುತ್ತಿದ್ದ ಆಲ್ಟೊ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ಇನ್ನೊಂದು ಬದಿಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಸಾರಿಗೆ ನಿಗಮದ ಬಸ್ಸಿಗೆ ಕಾರು ಬಡಿದಿದೆ.</p><p>ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಾನಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.</p><p>ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಆಯಿತು.</p><p>ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ಆಗಿತ್ತು. ಮದುವೆಯಾದ ದೇಂತಡ್ಕ ದೇವಸ್ಥಾನಕ್ಕೆ ದಂಪತಿ ಶನಿವಾರ ಭೇಟಿ ನೀಡಿ ಮಾವನ ಮನೆಗೆ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.</p><p>ದಂಪತಿ ಮಂಗಳೂರಿನ ಖಾಸಗಿ ಕಂಪೆನಿಯೊಂದರ ಉದ್ಯೋಗಿಗಳು. ಮೆಲ್ಕಾರ್ ಸಂಚಾರಿ ಠಾಣೆ ಪೋಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>