ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ

Published 27 ಅಕ್ಟೋಬರ್ 2023, 19:30 IST
Last Updated 27 ಅಕ್ಟೋಬರ್ 2023, 19:30 IST
ಅಕ್ಷರ ಗಾತ್ರ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಮೂವರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದೆ.

ನಿಷೇಧಿತ ಪಿಎಫ್‌ಐ ಸಂಘಟನೆ ಕಾರ್ಯಕರ್ತರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಡಂಗಡಿ ‌ಗ್ರಾಮದ ನೌಷದ್ (32 ವರ್ಷ– ಆರೋಪಿ ಸಂಖ್ಯೆ 23), ಕೊಡಗು ಜಿಲ್ಲೆ ಸೋಮವಾರಪೇಟೆಯ ಚೌಡ್ಲಿ ನಿವಾಸಿ ಅಬ್ದುಲ್‌ ನಾಸಿರ್‌ (41 ವರ್ಷ– ಆರೋಪಿ ಸಂಖ್ಯೆ 22), ಸೋಮವಾರಪೇಟೆಯ ಹನಗಲ್‌ ಕಲಂದಕೂರ್‌ ನಿವಾಸಿ, ಅಬ್ದುಲ್‌ ರಹಿಮಾನ್‌ (36 ವರ್ಷ– ಆರೋಪಿ  ಸಂಖ್ಯೆ 24) ಈ ಮೂವರ ಬಗ್ಗೆ ಸುಳಿವು ನೀಡಿದವರಿಗೆ ತಲಾ ₹2 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT