ಮಂಗಳೂರು: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆಗೆ ಸಂಬಂಧಿಸಿ ಬೆಳ್ಳಾರೆ ಗ್ರಾಮದ ಶಹೀದ್ ಎಂ. ಎಸ್. ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶನಿವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 14ಕ್ಕೆ ಏರಿದೆ.
ಸುಳ್ಯ ತಾಲ್ಲೂಕಿನ ಕಳೆಂಜ ಗ್ರಾಮದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪ್ರವೀಣ್ ಅವರನ್ನು ಕೊಲೆ ಮಾಡಲಾಗಿದ್ದು, ಶಹೀದ್ ಮನೆಯಲ್ಲೇ ಸಂಚು ರೂಪಿಸಲಾಗಿತ್ತು ಎಂದು ಆರೋಪಿಗಳು ಹೇಳಿರುವುದಾಗಿ ಎನ್ಐಎ ಮೂಲಗಳು ತಿಳಿಸಿವೆ. ಜುಲೈ 19ರಂದು ಮಸೂದ್ ಮೇಲೆ ಹಲ್ಲೆ ಮಾಡಲಾಗಿತ್ತು. 21ರಂದು ಕೊನೆಯುಸಿರೆಳೆದಿದ್ದರು.