<p><strong>ಪುತ್ತೂರು</strong>: ಬೆಳ್ತಂಗಡಿ ತಾಲ್ಲೂಕಿನ ವೇಣೂರು ಠಾಣಾ ವ್ಯಾಪ್ತಿಯ ಕುಕ್ಕೇಡಿಯಲ್ಲಿ ಮೂವರ ಸಾವಿಗೆ ಕಾರಣವಾದ ಸುಡುಮದ್ದು ಸ್ಫೋಟ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಮೂಲಕ ತನಿಖೆ ನಡೆಸಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಮೋಹನ್ದಾಸ್ ದೋಳ್ಪಾಡಿ ಆಗ್ರಹಿಸಿದರು.</p>.<p>ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಪಟಾಕಿ, ಸುಡುಮದ್ದಿನಿಂದ ಇಷ್ಟೊಂದು ಭೀಕರ ಸ್ಫೋಟ ಸಂಭವಿಸಲು ಸಾಧ್ಯವಿಲ್ಲ ಎಂಬ ಅನುಮಾನ ಉಂಟಾಗಿದೆ. ಹಾಗಾಗಿ ಸ್ಥಳೀಯ ಪೊಲೀಸರ ತನಿಖೆಯಿಂದ ಇದರ ಮೂಲ ಹುಡುಕುವ ಕೆಲಸ ಅಸಾಧ್ಯವಾಗಿದೆ. ತನಿಖಾದಳವೇ ಈ ತನಿಖೆ ಕೈಗೊಂಡರೆ ಮೂಲ ಹುಡುಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.</p>.<p>ಜಿಲ್ಲೆಯಲ್ಲಿ ಇಂಥ ಘಟನೆ ಮರುಕಳಿಸದಂತೆ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ರೈ ಹೊಸಮನೆ, ಜಿಲ್ಲಾ ಸಹ ಸಂಯೋಜಕರಾದ ಅನೂಪ್ ಕುಮಾರ್ ಸುಳ್ಯ, ನಿರಂಜನ್ ವೇಣೂರು, ದಿನೇಶ್ ಪಂಜಿಗ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಬೆಳ್ತಂಗಡಿ ತಾಲ್ಲೂಕಿನ ವೇಣೂರು ಠಾಣಾ ವ್ಯಾಪ್ತಿಯ ಕುಕ್ಕೇಡಿಯಲ್ಲಿ ಮೂವರ ಸಾವಿಗೆ ಕಾರಣವಾದ ಸುಡುಮದ್ದು ಸ್ಫೋಟ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಮೂಲಕ ತನಿಖೆ ನಡೆಸಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಮೋಹನ್ದಾಸ್ ದೋಳ್ಪಾಡಿ ಆಗ್ರಹಿಸಿದರು.</p>.<p>ಪುತ್ತೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಪಟಾಕಿ, ಸುಡುಮದ್ದಿನಿಂದ ಇಷ್ಟೊಂದು ಭೀಕರ ಸ್ಫೋಟ ಸಂಭವಿಸಲು ಸಾಧ್ಯವಿಲ್ಲ ಎಂಬ ಅನುಮಾನ ಉಂಟಾಗಿದೆ. ಹಾಗಾಗಿ ಸ್ಥಳೀಯ ಪೊಲೀಸರ ತನಿಖೆಯಿಂದ ಇದರ ಮೂಲ ಹುಡುಕುವ ಕೆಲಸ ಅಸಾಧ್ಯವಾಗಿದೆ. ತನಿಖಾದಳವೇ ಈ ತನಿಖೆ ಕೈಗೊಂಡರೆ ಮೂಲ ಹುಡುಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.</p>.<p>ಜಿಲ್ಲೆಯಲ್ಲಿ ಇಂಥ ಘಟನೆ ಮರುಕಳಿಸದಂತೆ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ರೈ ಹೊಸಮನೆ, ಜಿಲ್ಲಾ ಸಹ ಸಂಯೋಜಕರಾದ ಅನೂಪ್ ಕುಮಾರ್ ಸುಳ್ಯ, ನಿರಂಜನ್ ವೇಣೂರು, ದಿನೇಶ್ ಪಂಜಿಗ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>