ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ‘ಇದು ರಾಜ್ಯ ಸರ್ಕಾರದ ಬೃಹತ್ ಕೈಗಾರಿಕೆಯಾಗಿದ್ದು, ಇದನ್ನು ಈ ಕ್ಷೇತ್ರದಲ್ಲಿ ಸ್ಥಾಪಿಸಲು ಅನುಮತಿ ನೀಡಿದೆ. ಇದು ಸುಮಾರು 50 ಎಕರೆ ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಲಿದ್ದು, ಖಾಸಗಿ ಜಾಗ ಅತಿಕ್ರಮಣವಾಗುವುದಿಲ್ಲ ಹಾಗೂ ಸ್ಥಳೀಯರಿಗೆ ತೊಂದರೆ ಆಗುವುದಿಲ್ಲ. ಯೋಜನೆಯಿಂದ ಸ್ಥಳೀಯರಿಗೆ ಉದ್ಯೋಗವಕಾಶ ಲಭಿಸಲಿದೆ’ ಎಂದರು.