ಮಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ನಗರದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ಇಸ್ಕಾನ್ ಕುಡುಪು ಕಟ್ಟೆ ವತಿಯಿಂದ ಪ್ರತಿ ದಿನ ಸಂಜೆ 6ರಿಂದ ರಾತ್ರಿ 8ರವರೆಗೆ ರಾತ್ರಿ ಊಟದ ವ್ಯವಸ್ಥೆ ಆರಂಭಿಸಲಾಗಿದೆ.
ಬುಧವಾರ ರಾತ್ರಿ ಊಟದ ವ್ಯವಸ್ಥೆಗೆ ಚಾಲನೆ ನೀಡಿದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಲಾಕ್ಡೌನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಊಟದ ವ್ಯವಸ್ಥೆಯನ್ನು ಇಸ್ಕಾನ್ ಕುಡುಪು ಕಟ್ಟೆ ವತಿಯಿಂದ ಮಾಡಿರುವುದು ಶ್ಲಾಘನೀಯ ಎಂದರು.
ಕಳೆದ ಲಾಕ್ಡೌನ್ ಅವಧಿಯಲ್ಲೂ ನಗರದ ಹಲವು ಕಡೆ ಹಸಿದವರಿಗೆ ಅನ್ನ ನೀಡುವ ಕೆಲಸ ಮಾಡಿದ್ದೇವೆ. ಈ ಬಾರಿ ಪ್ರಥಮವಾಗಿ ಪೊಲೀಸ್ ಇಲಾಖೆಗೆ ನೀಡುವ ಮೂಲಕ ಆರಂಭಿಸಿಸಲಾಗಿದೆ ಎಂದು ಇಸ್ಕಾನ್ ಕುಡುಪು ಕಟ್ಟೆಯ ಡಾ.ಸುತಾಪದಾಸ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ ಗಾಂವ್ಕರ್, ಇಸ್ಕಾನ್ನ ಲಕ್ಷ್ಮಣ್ದಾಸ್ ಇದ್ದರು.