ಮಂಗಳೂರು: ನಗರದ ಕೇಂದ್ರ ಮಾರುಕಟ್ಟೆಯಲ್ಲಿ ಚಿಲ್ಲರೆ ಮಾರಾಟಗಾರರು ಮಾತ್ರ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಖರೀದಿ ಮಾಡಬಹುದು. ಸಾರ್ವಜನಿಕರು ಈ ಮಾರುಕಟ್ಟೆಯಲ್ಲಿ ಖರೀದಿ ಮಾಡುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಚಿಲ್ಲರೆ ಮಾರಾಟಗಾರರು ತಮ್ಮ ಪ್ರದೇಶಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಬೇಕು. ಜನರು ತಮ್ಮ ಹತ್ತಿರದ ಅಂಗಡಿಗಳಲ್ಲಿ ಬೆಳಿಗ್ಗೆ 6 ರಿಂದ 12 ರವರೆಗೆ ಮಾತ್ರ ಖರೀದಿ ಮಾಡಬಹುದು ಎಂದು ಹೇಳಿದ್ದಾರೆ.