ಬಂಟ್ವಾಳ: ರಾಜ್ಯ ನಾಯಕತ್ವದಲ್ಲಿ ಅಪಸ್ವರ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡಲು ಎಲ್ಲ ಸಚಿವರು, ಶಾಸಕರಿಗೆ ಸೂಚಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು.
ಶನಿವಾರ ಇಲ್ಲಿ ಮಾತನಾಡಿದ ಅವರು, ‘ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನಡೆಸಿದ್ದ ‘ಜನಸೇವಕ್ ಯಾತ್ರೆ’ ಮಾದರಿಯಲ್ಲಿ ಶ್ರಮಿಸಲು ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದರು.