ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯವು 125 ವರ್ಷಗಳಿಂದ ಕಾಣದ ಬರಗಾಲ ಸ್ಥಿತಿ ಎದುರಿಸುತ್ತಿದೆ. ಆದರೂ ಸರ್ಕಾರ ಈ ಬಗ್ಗೆ ಯಾವುದೇ ಪರಿಹಾರ ನೀಡಲು ಕ್ರಮ ಕೈಗೊಂಡಿಲ್ಲ. ₹ 2 ಸಾವಿರ ಘೋಷಣೆ ಮಾಡಿದ್ದರೂ ಅದು ರೈತರ ಖಾತೆಗೆ ತಲುಪಿಲ್ಲ. ಉತ್ತರ ಕರ್ನಾಟಕದಲ್ಲಿ ನನೆಗುದಿಗೆ ಬಿದ್ದಿರುವ ನೀರಿನ ಯೋಜನೆಗಳ ಕುರಿತು ಯೋಚಿಸಿಲ್ಲ. ಅಧಿವೇಶನದಲ್ಲಿ ಬರ ನಿರ್ವಹಣೆಗೆ ₹ 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆಗೆ ಹಾಗೂ ರೈತರಿಗೆ ₹2 ಲಕ್ಷ ದವರೆಗೆ ಸಾಲ ಮನ್ನಾ ಮಾಡಲು ವಿರೋಧಪಕ್ಷ ಆಗ್ರಹಿಸಿತ್ತು. ಆದರೆ, ಸರ್ಕಾರ ಸ್ಪಂದನೆ ನೀಡಿಲ್ಲ. ಹಿಂದುಳಿದ ವರ್ಗಕ್ಕೆ ₹ 50 ಕೋಟಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹ 10 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದರೂ ಸರ್ಕಾರ ಅದನ್ನು ಬಿಡುಗಡೆಗೊಳಿಸುವ ಸ್ಥಿತಿಯಲ್ಲಿಲ್ಲ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ₹ 2 ಕೋಟಿ ಪೈಕಿ, ₹ 50 ಲಕ್ಷ ಮಾತ್ರ ಬಿಡುಗಡೆಗೊಂಡಿದೆ’ ಎಂದು ಹೇಳಿದರು.