ಮಂಗಳೂರು:ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಇಂಟರ್ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ.
ರಾಜಧಾನಿ ಲಖನೌ ಸೇರಿದಂತೆ ಉತ್ತರ ಪ್ರದೇಶ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಕಡಿತಗೊಳಿಸಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಉತ್ತರ ಪ್ರದೇಶದಲ್ಲಿ ಖಾಸಗಿ ವಾಹಿನಿಗಳ ಸುದ್ದಿ ಪ್ರಸಾರಕ್ಕೂ ಕಡಿವಾಣ ಬಿದ್ದಿದೆ.
ಅಸ್ಸಾಂ ಮತ್ತು ಮೇಘಾಲಯದಲ್ಲಿ ಇಂಟರ್ನೆಟ್ ಕಡಿತ ಮುಂದುವರಿದಿದೆ. ದೆಹಲಿಯಲ್ಲಿ ಮಾತ್ರ ಇಂಟರ್ನೆಟ್ ಸೇವೆಗಳು ಪುನರರಾಂಭಗೊಂಡಿವೆ.