<p><strong>ಮಂಗಳೂರು</strong>: ಇತರ ರಾಜ್ಯಗಳಿಗೆ ಪ್ರಯಾಣಿಸಲು ಯಾವುದೇ ತಡೆಗಳಿಲ್ಲ. ನೌಕರಿ ಸಂಬಂಧ ನಿತ್ಯ ಕರ್ನಾಟಕಕ್ಕೆ ತೆರಳಿ ಮರಳುವ ಕಾಸರಗೋಡು ಜಿಲ್ಲೆಯ ನಿವಾಸಿಗಳಿಗೆ ಪ್ರತ್ಯೇಕ ನೋಂದಣಿ, ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.</p>.<p>ಕೊರೊನಾ ಕೋರ್ ಸಮಿತಿಯ ಆನ್ಲೈನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕರ್ನಾಟಕದಲ್ಲಿ ಶಾಶ್ವತವಾಗಿ ನೆಲೆಸಿರುವ, ಕಾಸರಗೋಡು ಜಿಲ್ಲೆಗೆ ನಿತ್ಯ ಬಂದು, ಹೋಗುವ ಮಂದಿ 21 ದಿನಗಳಿಗೊಮ್ಮೆ ಕೋವಿಡ್– 19 ಜಾಗ್ರತಾ ಪೋರ್ಟಲ್ನಲ್ಲಿ ಆಂಟಿಜೆನ್ ತಪಾಸಣೆ ಪ್ರಮಾಣಪತ್ರ ಅಪ್ಲೋಡ್ ಮಾಡಬೇಕು. ಇವರು ಜಾಲ್ಸೂರು, ಪೆರ್ಲ, ಪಾಣತ್ತೂರು, ಮಾಣಿಮೂಲೆ-ಬಂದಡ್ಕ ರಸ್ತೆಗಳ ಮೂಲಕವೂ ಕರ್ನಾಟಕಕ್ಕೆ ನಿತ್ಯ ಸಂಚಾರ ನಡೆಸಬಹುದು ಎಂದರು.</p>.<p>ಸರಕು ವಾಹನಗಳ ಸೇರಿದಂತೆ ವಾಹನಗಳಿಗೆ ಈ ರಸ್ತೆಗಳಲ್ಲಿ ತಡೆ ಇರುವುದಿಲ್ಲ. ಇತರ ರಾಜ್ಯಗಳಲ್ಲಿ ಶಾಶ್ವತವಾಗಿ ನೆಲೆಸಿದ್ದು, ಈಗ ಕಾಸರಗೋಡು ಜಿಲ್ಲೆಯಲ್ಲಿ ಶಾಶ್ವತವಾಗಿ ನೆಲೆಸುವ ಉದ್ದೇಶದಿಂದ ಬರುವ ಜನರಿಗೂ ಪಾಸ್ ಅಗತ್ಯವಿಲ್ಲ. ಕೋವಿಡ್– 19 ಪೋರ್ಟಲ್ನಲ್ಲಿ ಆ್ಯಂಟಿಜೆನ್ ತಪಾಸಣೆ ಪ್ರಮಾಣಪತ್ರ ಅಪ್ಲೋಡ್ ಮಾಡಿದರೆ ಸಾಕು ಎಂದು ತಿಳಿಸಿದರು.</p>.<p>ಕೇಂದ್ರ ಆರೋಗ್ಯ ಮಂತ್ರಾಲಯ ಮತ್ತು ಐ.ಸಿ.ಎಂ.ಆರ್.ನ ಆದೇಶ ಪ್ರಕಾರ 14 ದಿನಗಳ ಕ್ವಾರಂಟೈನ್ ಅನಿವಾರ್ಯವಾಗಿದೆ ಎಂದ ಅವರು, ಕೋವಿಡ್– 19 ಜಾಗ್ರತಾ ವೆಬ್ ಪೋರ್ಟಲ್ ನೋಂದಣಿ ಮಾಡಿದ ಜನರು ರಾಷ್ಟ್ರೀಯ ಹೆದ್ದಾರಿ 66 ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮುಕ್ತಗೊಳಿಸಲಾದ 4 ಗಡಿ ರಸ್ತೆಗಳ ಮೂಲಕ ತೆರಳಿ, ಮರಳ ಬಹುದಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಇತರ ರಾಜ್ಯಗಳಿಗೆ ಪ್ರಯಾಣಿಸಲು ಯಾವುದೇ ತಡೆಗಳಿಲ್ಲ. ನೌಕರಿ ಸಂಬಂಧ ನಿತ್ಯ ಕರ್ನಾಟಕಕ್ಕೆ ತೆರಳಿ ಮರಳುವ ಕಾಸರಗೋಡು ಜಿಲ್ಲೆಯ ನಿವಾಸಿಗಳಿಗೆ ಪ್ರತ್ಯೇಕ ನೋಂದಣಿ, ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.</p>.<p>ಕೊರೊನಾ ಕೋರ್ ಸಮಿತಿಯ ಆನ್ಲೈನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕರ್ನಾಟಕದಲ್ಲಿ ಶಾಶ್ವತವಾಗಿ ನೆಲೆಸಿರುವ, ಕಾಸರಗೋಡು ಜಿಲ್ಲೆಗೆ ನಿತ್ಯ ಬಂದು, ಹೋಗುವ ಮಂದಿ 21 ದಿನಗಳಿಗೊಮ್ಮೆ ಕೋವಿಡ್– 19 ಜಾಗ್ರತಾ ಪೋರ್ಟಲ್ನಲ್ಲಿ ಆಂಟಿಜೆನ್ ತಪಾಸಣೆ ಪ್ರಮಾಣಪತ್ರ ಅಪ್ಲೋಡ್ ಮಾಡಬೇಕು. ಇವರು ಜಾಲ್ಸೂರು, ಪೆರ್ಲ, ಪಾಣತ್ತೂರು, ಮಾಣಿಮೂಲೆ-ಬಂದಡ್ಕ ರಸ್ತೆಗಳ ಮೂಲಕವೂ ಕರ್ನಾಟಕಕ್ಕೆ ನಿತ್ಯ ಸಂಚಾರ ನಡೆಸಬಹುದು ಎಂದರು.</p>.<p>ಸರಕು ವಾಹನಗಳ ಸೇರಿದಂತೆ ವಾಹನಗಳಿಗೆ ಈ ರಸ್ತೆಗಳಲ್ಲಿ ತಡೆ ಇರುವುದಿಲ್ಲ. ಇತರ ರಾಜ್ಯಗಳಲ್ಲಿ ಶಾಶ್ವತವಾಗಿ ನೆಲೆಸಿದ್ದು, ಈಗ ಕಾಸರಗೋಡು ಜಿಲ್ಲೆಯಲ್ಲಿ ಶಾಶ್ವತವಾಗಿ ನೆಲೆಸುವ ಉದ್ದೇಶದಿಂದ ಬರುವ ಜನರಿಗೂ ಪಾಸ್ ಅಗತ್ಯವಿಲ್ಲ. ಕೋವಿಡ್– 19 ಪೋರ್ಟಲ್ನಲ್ಲಿ ಆ್ಯಂಟಿಜೆನ್ ತಪಾಸಣೆ ಪ್ರಮಾಣಪತ್ರ ಅಪ್ಲೋಡ್ ಮಾಡಿದರೆ ಸಾಕು ಎಂದು ತಿಳಿಸಿದರು.</p>.<p>ಕೇಂದ್ರ ಆರೋಗ್ಯ ಮಂತ್ರಾಲಯ ಮತ್ತು ಐ.ಸಿ.ಎಂ.ಆರ್.ನ ಆದೇಶ ಪ್ರಕಾರ 14 ದಿನಗಳ ಕ್ವಾರಂಟೈನ್ ಅನಿವಾರ್ಯವಾಗಿದೆ ಎಂದ ಅವರು, ಕೋವಿಡ್– 19 ಜಾಗ್ರತಾ ವೆಬ್ ಪೋರ್ಟಲ್ ನೋಂದಣಿ ಮಾಡಿದ ಜನರು ರಾಷ್ಟ್ರೀಯ ಹೆದ್ದಾರಿ 66 ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮುಕ್ತಗೊಳಿಸಲಾದ 4 ಗಡಿ ರಸ್ತೆಗಳ ಮೂಲಕ ತೆರಳಿ, ಮರಳ ಬಹುದಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>