ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಉಳ್ಳಾಲ, ಬಜಪೆ, ಕೋಟೆಕಾರು ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಇಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಇದನ್ನು ಹೊರತುಪಡಿಸಿ, ಇನ್ನೆಲ್ಲಿಯೂ ನೀರಿನ ಸಮಸ್ಯೆ ಎದುರಾಗಿಲ್ಲ. ಮಂಗಳೂರು ನಗರದಲ್ಲಿ ಸದ್ಯಕ್ಕೆ ನೀರಿನ ರೇಷನಿಂಗ್ ಮಾಡುವ ಸಂದರ್ಭ ಇಲ್ಲ. ಎಎಂಆರ್ ಅಣೆಕಟ್ಟೆಯಲ್ಲಿ ಕಳೆದ ವರ್ಷ ಈ ಅವಧಿಗಿಂತ ನೀರಿನ ಮಟ್ಟ ತುಸು ಇಳಿಕೆಯಾಗಿದೆ. ಸುತ್ತಲಿನ ಕೃಷಿ ಭೂಮಿಗೆ ನೀರು ಬಳಸದಂತೆ ಸೂಚನೆ ನೀಡಲಾಗಿದೆ’ ಎಂದರು.