<p><strong>ಮೂಡುಬಿದಿರೆ:</strong> ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರು ಬದಲಾಯಿಸುವ ಮೂಲಕ ಯೋಜನೆಯ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ. ಕಾರ್ಮಿಕರ ಹೆಸರಿನ ಯೋಜನೆಗಳು ಬಂಡವಾಳಶಾಹಿ ಮತ್ತು ಶ್ರೀಮಂತರನ್ನು ಪೋಷಿಸುತ್ತಿವೆ. ಯೋಜನೆಯಿಂದ ಕಾರ್ಮಿಕರು ವಂಚಿತರಾಗುತ್ತಿದ್ದಾರೆ ಎಂದು ಜಿಲ್ಲಾ ಮುಖಂಡ ಯಾದವ ಶೆಟ್ಟಿ ಹೇಳಿದರು.</p>.<p>ಮೂಡುಬಿದಿರೆ ಸಮಾಜ ಮಂದಿರದಲ್ಲಿ ಸೋಮವಾರ ನಡೆದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ತಾಲ್ಲೂಕು ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಕಾರ್ಮಿಕ ಇಲಾಖೆ ಅಧಿಕಾರಿ ಕುಮಾರ್ ಬಿ.ಸಮಾವೇಶ ಉದ್ಘಾಟಿಸಿ, ಗ್ರಾಮ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಮನೆ, ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಾಗ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಗೆ ಸಂಗ್ರಹಿಸಬೇಕಾದ ಸೆಸ್ ಅನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಟ್ಟಡ ಕಾರ್ಮಿಕರೂ ನಿಗಾ ವಹಿಸಬೇಕು ಎಂದರು.</p>.<p>ಕಾರ್ಮಿಕರು ಕ್ರಮಬದ್ಧವಾಗಿ ಸವಲತ್ತುಗಳನ್ನು ಪಡೆಯಲು ದಾಖಲೆ ಪತ್ರಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು ಎಂದರು.</p>.<p>ಖಂಡ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ, ಮುಖಂಡರಾದ ರಮಣಿ, ರಾಧಾ ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಂಕರ್ ಸ್ವಾಗತಿಸಿದರು. ಸದಾನಂದ ಮಾರ್ನಾಡ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರು ಬದಲಾಯಿಸುವ ಮೂಲಕ ಯೋಜನೆಯ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ. ಕಾರ್ಮಿಕರ ಹೆಸರಿನ ಯೋಜನೆಗಳು ಬಂಡವಾಳಶಾಹಿ ಮತ್ತು ಶ್ರೀಮಂತರನ್ನು ಪೋಷಿಸುತ್ತಿವೆ. ಯೋಜನೆಯಿಂದ ಕಾರ್ಮಿಕರು ವಂಚಿತರಾಗುತ್ತಿದ್ದಾರೆ ಎಂದು ಜಿಲ್ಲಾ ಮುಖಂಡ ಯಾದವ ಶೆಟ್ಟಿ ಹೇಳಿದರು.</p>.<p>ಮೂಡುಬಿದಿರೆ ಸಮಾಜ ಮಂದಿರದಲ್ಲಿ ಸೋಮವಾರ ನಡೆದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ತಾಲ್ಲೂಕು ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಕಾರ್ಮಿಕ ಇಲಾಖೆ ಅಧಿಕಾರಿ ಕುಮಾರ್ ಬಿ.ಸಮಾವೇಶ ಉದ್ಘಾಟಿಸಿ, ಗ್ರಾಮ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಮನೆ, ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಾಗ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಗೆ ಸಂಗ್ರಹಿಸಬೇಕಾದ ಸೆಸ್ ಅನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಟ್ಟಡ ಕಾರ್ಮಿಕರೂ ನಿಗಾ ವಹಿಸಬೇಕು ಎಂದರು.</p>.<p>ಕಾರ್ಮಿಕರು ಕ್ರಮಬದ್ಧವಾಗಿ ಸವಲತ್ತುಗಳನ್ನು ಪಡೆಯಲು ದಾಖಲೆ ಪತ್ರಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು ಎಂದರು.</p>.<p>ಖಂಡ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ, ಮುಖಂಡರಾದ ರಮಣಿ, ರಾಧಾ ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಂಕರ್ ಸ್ವಾಗತಿಸಿದರು. ಸದಾನಂದ ಮಾರ್ನಾಡ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>