<p><strong>ಮಂಗಳೂರು</strong>: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲೆಗಳಲ್ಲಿ ಈ ಬಾರಿ ಅನಿವಾಸಿ ಭಾರತೀಯ ಮಕ್ಕಳ ದಾಖಲಾತಿ ಗಣನೀಯವಾಗಿ ಹೆಚ್ಚಿದೆ. ಈ ಮೊದಲು ಗಲ್ಫ್ ರಾಷ್ಟ್ರಗಳಲ್ಲಿ ಓದುತ್ತಿದ್ದ ಮಕ್ಕಳು, ಇದೀಗ ತವರು ನೆಲದಲ್ಲಿ ಶಿಕ್ಷಣ ಪಡೆಯಲು ಮುಂದಾಗಿದ್ದಾರೆ.</p>.<p>ಕೋವಿಡ್–19ನಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ಕಳೆದುಕೊಂಡಿ ರುವವರು ಕುಟುಂಬ ಸಹಿತ ತವರಿಗೆ ಮರಳಿದ್ದು, ತಮ್ಮ ಮಕ್ಕಳಿಗೆ ಇಲ್ಲಿಯೇ ಶಿಕ್ಷಣ ಕೊಡಿಸಲು ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 200ಕ್ಕೂ ಅಧಿಕ ಎನ್ಆರ್ಐ ಮಕ್ಕಳು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ.</p>.<p>‘ನಮ್ಮ ಶಾಲೆಯೂ ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಗಳಲ್ಲಿ ಎನ್ಆರ್ಐ ಮಕ್ಕಳ ದಾಖಲಾತಿ ಈ ಬಾರಿ ಹೆಚ್ಚಳವಾಗಿದೆ. ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ಇಲ್ಲಿಯೇ ಶಾಲೆಗೆ ಕಳುಹಿಸಲು ಮುಂದಾಗಿದ್ದಾರೆ’ ಎಂದು ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಫಾ. ರಾಬರ್ಟ್ ಡಿಸೋಜ ತಿಳಿಸಿದ್ದಾರೆ.</p>.<p>ಆರ್ಥಿಕ ಬಿಕ್ಕಟ್ಟಿನಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ಕಡಿತ ಆಗುತ್ತಿದ್ದು, ಹಲವರು ಉದ್ಯೋಗ ಕಳೆದುಕೊಂಡು ತವರಿಗೆ ಮರಳುತ್ತಿ ದ್ದಾರೆ. ಜೊತೆಗೆ ಗಲ್ಫ್ ರಾಷ್ಟ್ರಗಳಿಗಿಂತ ಭಾರತದಲ್ಲಿ ಶೈಕ್ಷಣಿಕ ವೆಚ್ಚ ಕಡಿಮೆಯಾಗಿದ್ದು, ಬಹುತೇಕ ಜನರು ತಮ್ಮ ತವರು ಜಿಲ್ಲೆಗಳಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಲು ನಿರ್ಧರಿಸಿದ್ದಾರೆ.</p>.<p>ಈ ಮೊದಲು 10ನೇ ತರಗತಿ ಉತ್ತೀರ್ಣರಾದ ನಂತರವೇ ಎನ್ಆರ್ಐ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಮಂಗಳೂರಿಗೆ ಬರುತ್ತಿದ್ದರು. ಇದೀಗ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಿರುವುದು ವಿಶೇಷವಾಗಿದೆ.</p>.<p>ನಗರದ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಐದನೇ ತರಗತಿಯಿಂದ ವಿದ್ಯಾಭ್ಯಾಸ ಆರಂಭವಾಗುತ್ತಿದ್ದು, ಈ ವರ್ಷವೇ ಸುಮಾರು 40ಕ್ಕೂ ಅಧಿಕ ಎನ್ಆರ್ಐ ಮಕ್ಕಳು ಇಲ್ಲಿ ಪ್ರವೇಶ ಪಡೆದಿದ್ದಾರೆ. ಇನ್ನೂ ಕೆಲ ಮಕ್ಕಳು ಅರ್ಜಿ ಸಲ್ಲಿಸಿದ್ದರೂ, ಸೀಟುಗಳಿಲ್ಲದೇ ಆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಲ್ಲದೆ ಸಿಬಿಎಸ್ಇ ನಿಯಮಾವಳಿ ಪ್ರಕಾರ ಒಂದು ತರಗತಿಗೆ ಕೇವಲ 40 ಮಕ್ಕಳಿಗೆ ಮಾತ್ರ ಪ್ರವೇಶ ನೀಡಬಹುದಾಗಿದೆ. ಇದೇ ರೀತಿ ಪ್ರೆಸಿಡೆನ್ಸಿ ಶಾಲೆಯಲ್ಲೂ ಈ ಬಾರಿ 10 ಎನ್ಆರ್ಐ ಮಕ್ಕಳು ದಾಖಲಾತಿ ಪಡೆದಿದ್ದಾರೆ.</p>.<p>ಎನ್ಆರ್ಐಗಳು ಶಿಕ್ಷಣಕ್ಕಾಗಿ ಕರ್ನಾಟಕವನ್ನೇ ಆಯ್ಕೆ ಮಾಡುತ್ತಿದ್ದು, 2018–19ರಲ್ಲಿ 10,023 ಎನ್ಆರ್ಐ ಮಕ್ಕಳು ದಾಖಲಾತಿ ಪಡೆದಿದ್ದರು. ಇದು ಇಡೀ ದೇಶದಲ್ಲಿಯೇ ಗರಿಷ್ಠ ಸಂಖ್ಯೆಯ ಎನ್ಆರ್ಐ ಮಕ್ಕಳು ದಾಖಲೆ ಹೊಂದಿರುವ ರಾಜ್ಯವಾಗಿತ್ತು. ಅದರಲ್ಲಿ ಮಂಗಳೂರಿನಲ್ಲಿಯೇ 100ಕ್ಕೂ ಅಧಿಕ ಮಕ್ಕಳು ವಿವಿಧ ತರಗತಿಗಳಿಗೆ ಪ್ರವೇಶ ಪಡೆದಿದ್ದರು.</p>.<p class="Briefhead"><strong>ಕೇರಳ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ</strong><br />ಪದವಿ ಹಾಗೂ ಪದವಿಪೂರ್ವ ಶಿಕ್ಷಣಕ್ಕಾಗಿ ಕಾಸರಗೋಡು ಜಿಲ್ಲೆಯ ಹೆಚ್ಚಿನ ವಿದ್ಯಾರ್ಥಿಗಳು ಮಂಗಳೂರನ್ನೇ ಅವಲಂಬಿಸಿದ್ದಾರೆ. ಇದೀಗ ಕೋವಿಡ್–19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳು, ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿಗೆ ಬರಲು ಅಡ್ಡಿಯಾಗಿವೆ. ಇದರ ಪರಿಣಾಮ ಪದವಿ ಪ್ರವೇಶದಲ್ಲಿ ಕೇರಳದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.</p>.<p>ನಗರದ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿ ವರ್ಷ ಕಾಸರಗೋಡು ಜಿಲ್ಲೆಯ 400ರಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದರು. ಈ ಬಾರಿ ಇದುವರೆಗೆ ಕೇವಲ 50 ಮಂದಿ ಪ್ರವೇಶ ಪಡೆದಿದ್ದಾರೆ. ಇನ್ನು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಮಿಲಾಗ್ರಿಸ್ ಸೇರಿದಂತೆ ಇತರ ಕಾಲೇಜುಗಳಲ್ಲೂ ಕಾಸರಗೋಡು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.</p>.<p>‘ರಾಜ್ಯ ಸರ್ಕಾರದ ನಿಯಮಗಳು ವಿದ್ಯಾರ್ಥಿಗಳಿಗೆ ತೊಡಕಾಗಿರಬಹುದು. ವಾರಕ್ಕೊಮ್ಮೆ ಆರ್ಟಿಪಿಸಿಆರ್ ವರದಿ ಮಾಡಿಸುವುದು, ನಿತ್ಯ ಭಯದಲ್ಲಿಯೇ ಮಂಗಳೂರಿಗೆ ಬಂದು ಹೋಗುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿರಬಹುದು’ ಎಂದು ಪದವಿ ಕಾಲೇಜಿನ ಪ್ರಾಂಶುಪಾಲರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲೆಗಳಲ್ಲಿ ಈ ಬಾರಿ ಅನಿವಾಸಿ ಭಾರತೀಯ ಮಕ್ಕಳ ದಾಖಲಾತಿ ಗಣನೀಯವಾಗಿ ಹೆಚ್ಚಿದೆ. ಈ ಮೊದಲು ಗಲ್ಫ್ ರಾಷ್ಟ್ರಗಳಲ್ಲಿ ಓದುತ್ತಿದ್ದ ಮಕ್ಕಳು, ಇದೀಗ ತವರು ನೆಲದಲ್ಲಿ ಶಿಕ್ಷಣ ಪಡೆಯಲು ಮುಂದಾಗಿದ್ದಾರೆ.</p>.<p>ಕೋವಿಡ್–19ನಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ಕಳೆದುಕೊಂಡಿ ರುವವರು ಕುಟುಂಬ ಸಹಿತ ತವರಿಗೆ ಮರಳಿದ್ದು, ತಮ್ಮ ಮಕ್ಕಳಿಗೆ ಇಲ್ಲಿಯೇ ಶಿಕ್ಷಣ ಕೊಡಿಸಲು ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 200ಕ್ಕೂ ಅಧಿಕ ಎನ್ಆರ್ಐ ಮಕ್ಕಳು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪ್ರವೇಶ ಪಡೆದಿದ್ದಾರೆ.</p>.<p>‘ನಮ್ಮ ಶಾಲೆಯೂ ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಗಳಲ್ಲಿ ಎನ್ಆರ್ಐ ಮಕ್ಕಳ ದಾಖಲಾತಿ ಈ ಬಾರಿ ಹೆಚ್ಚಳವಾಗಿದೆ. ಬಹಳಷ್ಟು ಪಾಲಕರು ತಮ್ಮ ಮಕ್ಕಳನ್ನು ಇಲ್ಲಿಯೇ ಶಾಲೆಗೆ ಕಳುಹಿಸಲು ಮುಂದಾಗಿದ್ದಾರೆ’ ಎಂದು ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಫಾ. ರಾಬರ್ಟ್ ಡಿಸೋಜ ತಿಳಿಸಿದ್ದಾರೆ.</p>.<p>ಆರ್ಥಿಕ ಬಿಕ್ಕಟ್ಟಿನಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ಕಡಿತ ಆಗುತ್ತಿದ್ದು, ಹಲವರು ಉದ್ಯೋಗ ಕಳೆದುಕೊಂಡು ತವರಿಗೆ ಮರಳುತ್ತಿ ದ್ದಾರೆ. ಜೊತೆಗೆ ಗಲ್ಫ್ ರಾಷ್ಟ್ರಗಳಿಗಿಂತ ಭಾರತದಲ್ಲಿ ಶೈಕ್ಷಣಿಕ ವೆಚ್ಚ ಕಡಿಮೆಯಾಗಿದ್ದು, ಬಹುತೇಕ ಜನರು ತಮ್ಮ ತವರು ಜಿಲ್ಲೆಗಳಲ್ಲಿಯೇ ಮಕ್ಕಳಿಗೆ ಶಿಕ್ಷಣ ಕೊಡಿಸಲು ನಿರ್ಧರಿಸಿದ್ದಾರೆ.</p>.<p>ಈ ಮೊದಲು 10ನೇ ತರಗತಿ ಉತ್ತೀರ್ಣರಾದ ನಂತರವೇ ಎನ್ಆರ್ಐ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಮಂಗಳೂರಿಗೆ ಬರುತ್ತಿದ್ದರು. ಇದೀಗ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಿರುವುದು ವಿಶೇಷವಾಗಿದೆ.</p>.<p>ನಗರದ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಐದನೇ ತರಗತಿಯಿಂದ ವಿದ್ಯಾಭ್ಯಾಸ ಆರಂಭವಾಗುತ್ತಿದ್ದು, ಈ ವರ್ಷವೇ ಸುಮಾರು 40ಕ್ಕೂ ಅಧಿಕ ಎನ್ಆರ್ಐ ಮಕ್ಕಳು ಇಲ್ಲಿ ಪ್ರವೇಶ ಪಡೆದಿದ್ದಾರೆ. ಇನ್ನೂ ಕೆಲ ಮಕ್ಕಳು ಅರ್ಜಿ ಸಲ್ಲಿಸಿದ್ದರೂ, ಸೀಟುಗಳಿಲ್ಲದೇ ಆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಲ್ಲದೆ ಸಿಬಿಎಸ್ಇ ನಿಯಮಾವಳಿ ಪ್ರಕಾರ ಒಂದು ತರಗತಿಗೆ ಕೇವಲ 40 ಮಕ್ಕಳಿಗೆ ಮಾತ್ರ ಪ್ರವೇಶ ನೀಡಬಹುದಾಗಿದೆ. ಇದೇ ರೀತಿ ಪ್ರೆಸಿಡೆನ್ಸಿ ಶಾಲೆಯಲ್ಲೂ ಈ ಬಾರಿ 10 ಎನ್ಆರ್ಐ ಮಕ್ಕಳು ದಾಖಲಾತಿ ಪಡೆದಿದ್ದಾರೆ.</p>.<p>ಎನ್ಆರ್ಐಗಳು ಶಿಕ್ಷಣಕ್ಕಾಗಿ ಕರ್ನಾಟಕವನ್ನೇ ಆಯ್ಕೆ ಮಾಡುತ್ತಿದ್ದು, 2018–19ರಲ್ಲಿ 10,023 ಎನ್ಆರ್ಐ ಮಕ್ಕಳು ದಾಖಲಾತಿ ಪಡೆದಿದ್ದರು. ಇದು ಇಡೀ ದೇಶದಲ್ಲಿಯೇ ಗರಿಷ್ಠ ಸಂಖ್ಯೆಯ ಎನ್ಆರ್ಐ ಮಕ್ಕಳು ದಾಖಲೆ ಹೊಂದಿರುವ ರಾಜ್ಯವಾಗಿತ್ತು. ಅದರಲ್ಲಿ ಮಂಗಳೂರಿನಲ್ಲಿಯೇ 100ಕ್ಕೂ ಅಧಿಕ ಮಕ್ಕಳು ವಿವಿಧ ತರಗತಿಗಳಿಗೆ ಪ್ರವೇಶ ಪಡೆದಿದ್ದರು.</p>.<p class="Briefhead"><strong>ಕೇರಳ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ</strong><br />ಪದವಿ ಹಾಗೂ ಪದವಿಪೂರ್ವ ಶಿಕ್ಷಣಕ್ಕಾಗಿ ಕಾಸರಗೋಡು ಜಿಲ್ಲೆಯ ಹೆಚ್ಚಿನ ವಿದ್ಯಾರ್ಥಿಗಳು ಮಂಗಳೂರನ್ನೇ ಅವಲಂಬಿಸಿದ್ದಾರೆ. ಇದೀಗ ಕೋವಿಡ್–19 ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳು, ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿಗೆ ಬರಲು ಅಡ್ಡಿಯಾಗಿವೆ. ಇದರ ಪರಿಣಾಮ ಪದವಿ ಪ್ರವೇಶದಲ್ಲಿ ಕೇರಳದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.</p>.<p>ನಗರದ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿ ವರ್ಷ ಕಾಸರಗೋಡು ಜಿಲ್ಲೆಯ 400ರಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದರು. ಈ ಬಾರಿ ಇದುವರೆಗೆ ಕೇವಲ 50 ಮಂದಿ ಪ್ರವೇಶ ಪಡೆದಿದ್ದಾರೆ. ಇನ್ನು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು, ಮಿಲಾಗ್ರಿಸ್ ಸೇರಿದಂತೆ ಇತರ ಕಾಲೇಜುಗಳಲ್ಲೂ ಕಾಸರಗೋಡು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.</p>.<p>‘ರಾಜ್ಯ ಸರ್ಕಾರದ ನಿಯಮಗಳು ವಿದ್ಯಾರ್ಥಿಗಳಿಗೆ ತೊಡಕಾಗಿರಬಹುದು. ವಾರಕ್ಕೊಮ್ಮೆ ಆರ್ಟಿಪಿಸಿಆರ್ ವರದಿ ಮಾಡಿಸುವುದು, ನಿತ್ಯ ಭಯದಲ್ಲಿಯೇ ಮಂಗಳೂರಿಗೆ ಬಂದು ಹೋಗುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿರಬಹುದು’ ಎಂದು ಪದವಿ ಕಾಲೇಜಿನ ಪ್ರಾಂಶುಪಾಲರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>