ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ನಿಲೇಶ್, ಕೆಡಿಪಿ ಸದಸ್ಯ ಗೋಪಾಲ್ ಶಂಕರಪುರ ಮಾತನಾಡಿ, ‘ಕಳೆದ ವರ್ಷ ನಿರ್ಮಾಣ ಮಾಡಿದ ಸೇತುವೆ ಕಾಮಗಾರಿ ಕಳಪೆಯಾಗಿದೆ. ಮುತ್ತಿನಕೊಪ್ಪ ಮುಖ್ಯರಸ್ತೆ ಮಧ್ಯೆ ದೊಡ್ಡಗುಂಡಿಯಾಗಿದೆ’ ಎಂದು ದೂರಿದರು. ಮುಂದಿನ ಏಳು ದಿನಗಳೊಳಗೆ ಶಂಕರಪುರ ಸೇತುವೆ ವೀಕ್ಷಣೆ ಮಾಡಲಾಗುವುದು ಎಂದು ಟಿ.ಡಿ.ರಾಜೇಗೌಡ ಹೇಳಿದರು.