<p><strong>ಮಂಗಳೂರು</strong>: ‘ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂಲ್ ಅಲಿ ಏಜೆಂಟ್ ಮೂಲಕ ₹ 25 ಲಕ್ಷ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಸಾರ್ವಜನಿಕರಿಗೆ ಕಿರುಕುಳ ನೀಡಿ ಹಣ ಪಡೆದು ಕಾಂಗ್ರೆಸ್ ಪಕ್ಷಕ್ಕೆ ನೀಡುತ್ತಿದ್ದಾರೆ ಎಂಬ ಸಂಶಯ ಮೂಡಿದೆ’ ಎಂದು ಜದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಚುನಾವಣಾ ಪ್ರಭಾರಿ ರವಿಶಂಕರ ಮಿಜಾರ್ ಹೇಳಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು,‘ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಮುಳುಗಿತ್ತು. ಮನ್ಸೂರ್ ಅಲಿ ಮುಡಾ ಆಯುಕ್ತರಾಗಿ ಬರುವಾಗಲೇ ಈ ಬಗ್ಗೆ ಗುಸುಗುಸು ಇತ್ತು’ ಎಂದರು.</p>.<p>‘ಮುಡಾ ಅಧ್ಯಕ್ಷನಾಗಿದ್ದಾಗ ನಾನು ಸಹಾಯಕೇಂದ್ರವನ್ನು ಆರಂಭಿಸಿ ಜನರಿಗೆ ಸುಲಭದಲ್ಲಿ ಸೇವೆ ಸಿಗುವಂತೆ ಮಾಡಿದ್ದೆ. ಲಂಚದ ಹಾವಳಿಗೆ ಕಡಿವಾಣ ಹಾಕಿದ್ದೆ. ಮೂಡಾ ಅಧಿಕಾರಿಗಳ ಲಂಚಕೋರತನಕ್ಕೆ ಸರ್ಕಾರ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗಡೆ, ಲಲ್ಲೇಶ್, ಮುಖಂಡ ರಾಧಾಕೃಷ್ಞ, ಮಾಧ್ಯಮ ಪ್ರಮುಖ್ ಮನೋಹರ ಕದ್ರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂಲ್ ಅಲಿ ಏಜೆಂಟ್ ಮೂಲಕ ₹ 25 ಲಕ್ಷ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಸಾರ್ವಜನಿಕರಿಗೆ ಕಿರುಕುಳ ನೀಡಿ ಹಣ ಪಡೆದು ಕಾಂಗ್ರೆಸ್ ಪಕ್ಷಕ್ಕೆ ನೀಡುತ್ತಿದ್ದಾರೆ ಎಂಬ ಸಂಶಯ ಮೂಡಿದೆ’ ಎಂದು ಜದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಚುನಾವಣಾ ಪ್ರಭಾರಿ ರವಿಶಂಕರ ಮಿಜಾರ್ ಹೇಳಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು,‘ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಮುಳುಗಿತ್ತು. ಮನ್ಸೂರ್ ಅಲಿ ಮುಡಾ ಆಯುಕ್ತರಾಗಿ ಬರುವಾಗಲೇ ಈ ಬಗ್ಗೆ ಗುಸುಗುಸು ಇತ್ತು’ ಎಂದರು.</p>.<p>‘ಮುಡಾ ಅಧ್ಯಕ್ಷನಾಗಿದ್ದಾಗ ನಾನು ಸಹಾಯಕೇಂದ್ರವನ್ನು ಆರಂಭಿಸಿ ಜನರಿಗೆ ಸುಲಭದಲ್ಲಿ ಸೇವೆ ಸಿಗುವಂತೆ ಮಾಡಿದ್ದೆ. ಲಂಚದ ಹಾವಳಿಗೆ ಕಡಿವಾಣ ಹಾಕಿದ್ದೆ. ಮೂಡಾ ಅಧಿಕಾರಿಗಳ ಲಂಚಕೋರತನಕ್ಕೆ ಸರ್ಕಾರ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗಡೆ, ಲಲ್ಲೇಶ್, ಮುಖಂಡ ರಾಧಾಕೃಷ್ಞ, ಮಾಧ್ಯಮ ಪ್ರಮುಖ್ ಮನೋಹರ ಕದ್ರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>