<p><strong>ಮಂಗಳೂರು</strong>: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ರಾಷ್ಟ್ರಕವಿ ಗೋವಿಂದ ಪೈ (ನವಭಾರತ) ವೃತ್ತವನ್ನು ಶುಕ್ರವಾರ ರಾತ್ರಿ ತೆರವುಗೊಳಿಸಿದ್ದು, ವೃತ್ತಕ್ಕೆ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ.</p>.<p>ಹಿಂದೆ ಇಲ್ಲಿ ನವಭಾರತ ಪತ್ರಿಕೆಯ ಮುದ್ರಣಾಲಯ ಇದ್ದಿದ್ದರಿಂದ ಈ ವೃತ್ತಕ್ಕೆ ನವಭಾರತ ವೃತ್ತ ಎಂದು ಕರೆಯಲಾಗುತ್ತಿತ್ತು. ಬಳಿಕ ಹಿರಿಯ ಸಾಹಿತಿ, ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಹೆಸರನ್ನು ಇಡಲಾಗಿತ್ತು.</p>.<p>ಇದೀಗ ಸ್ಮಾರ್ಟ್ ಸಿಟಿ ಯೋಜನೆಯಡಿ ಈ ವೃತ್ತದ ನಿರ್ಮಾಣ ಕಾಮಗಾರಿ ಮಾಡಲಾಗುತ್ತಿದೆ. ಬಸ್, ವಾಹನಗಳ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಇನ್ನಷ್ಟು ಸುಂದರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹಳೆಯ ಬಾವಿ ಪತ್ತೆ: ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತದಲ್ಲಿ (ನವಭಾರತ್ ವೃತ್ತ) ಶನಿವಾರ ಪುರಾತನ ಬಾವಿ ಪತ್ತೆಯಾಗಿದ್ದು, ಸುಮಾರು 100 ವರ್ಷಗಳಿಗೂ ಹಿಂದಿನ ಬಾವಿ ಇದೆಂದು ಹೇಳಲಾಗಿದೆ.</p>.<p>ಇತ್ತೀಚೆಗೆ ಹಂಪನಕಟ್ಟೆ ಬಳಿ ಪತ್ತೆಯಾಗಿದ್ದ ಬಾವಿಯ ಅವಧಿಯಲ್ಲೇ ಈ ಬಾವಿಯೂ ನಿರ್ಮಾಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯಲ್ಲಿ ಸುಮಾರು 20 ಅಡಿ ಆಳದಲ್ಲಿ ನೀರು ಕಂಡು ಬರುತ್ತಿದ್ದು, ಬಾವಿಯ ನಿಖರವಾದ ಆಳವನ್ನು ಅಂದಾಜಿಸಲಾಗಿಲ್ಲ.</p>.<p>‘35 ವರ್ಷಗಳ ಹಿಂದೆ ನವಭಾರತ್ ವೃತ್ತವನ್ನು ಅಭಿವೃದ್ಧಿ ಪಡಿಸಲಾಗಿತ್ತು. ಆ ಬಳಿಕ ವೃತ್ತದ ಮೇಲ್ಭಾಗವನ್ನಷ್ಟೇ ಸೌಂದರ್ಯೀಕರಣ ಮಾಡಲಾಗಿತ್ತು. ಹಿಂದೆ ವೃತ್ತದ ಅಭಿವೃದ್ಧಿಯ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಅಳವಡಿಸಿರುವ ಸಾಧ್ಯತೆ ಇದೆ. ಆದರೆ ಈ ಬಾವಿ ಎಷ್ಟು ಹಳೆಯದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಬಾವಿಯ ಅಸ್ತಿತ್ವವನ್ನು ಉಳಿಸಲು ಪ್ರಯತ್ನಿಸಲಾಗುವುದು’ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.</p>.<p>ಹಿಂದೆಲ್ಲಾ ಕೈಯಿಂದ ಮಾಡಿದ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿತ್ತು. ಹೀಗಾಗಿ ಬಾಳ್ವಿಕೆ ಹೆಚ್ಚಾಗಿದ್ದು, ಕಾಂಕ್ರಿಟೀಕರಣದ ಸಂದರ್ಭದಲ್ಲಿ ಹುದುಗಿರುವ ಈ ಬಾವಿಗಳು ಅತ್ಯಂತ ಸುರಕ್ಷಿತವಾಗಿರುವುದು ಕಂಡು ಬರುತ್ತಿದೆ ಎಂದರು.</p>.<p>ಸದ್ಯ ವೃತ್ತದ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು, ಕಾಮಗಾರಿ ಆರಂಭವಾಗಿದೆ. ಮುಂದೆ ಈ ವೃತ್ತವನ್ನು ಮಂಗಳೂರಿನ ಸೇವಾಂಜಲಿ ಚಾರಿಟಬಲ್ ಟ್ರಸ್ಟ್ನವರು ನಿರ್ವಹಣೆ ಮಾಡುವ ಬಗ್ಗೆ ಈಗಾಗಲೇ ಪಾಲಿಕೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ರಾಷ್ಟ್ರಕವಿ ಗೋವಿಂದ ಪೈ (ನವಭಾರತ) ವೃತ್ತವನ್ನು ಶುಕ್ರವಾರ ರಾತ್ರಿ ತೆರವುಗೊಳಿಸಿದ್ದು, ವೃತ್ತಕ್ಕೆ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ.</p>.<p>ಹಿಂದೆ ಇಲ್ಲಿ ನವಭಾರತ ಪತ್ರಿಕೆಯ ಮುದ್ರಣಾಲಯ ಇದ್ದಿದ್ದರಿಂದ ಈ ವೃತ್ತಕ್ಕೆ ನವಭಾರತ ವೃತ್ತ ಎಂದು ಕರೆಯಲಾಗುತ್ತಿತ್ತು. ಬಳಿಕ ಹಿರಿಯ ಸಾಹಿತಿ, ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಹೆಸರನ್ನು ಇಡಲಾಗಿತ್ತು.</p>.<p>ಇದೀಗ ಸ್ಮಾರ್ಟ್ ಸಿಟಿ ಯೋಜನೆಯಡಿ ಈ ವೃತ್ತದ ನಿರ್ಮಾಣ ಕಾಮಗಾರಿ ಮಾಡಲಾಗುತ್ತಿದೆ. ಬಸ್, ವಾಹನಗಳ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಇನ್ನಷ್ಟು ಸುಂದರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹಳೆಯ ಬಾವಿ ಪತ್ತೆ: ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತದಲ್ಲಿ (ನವಭಾರತ್ ವೃತ್ತ) ಶನಿವಾರ ಪುರಾತನ ಬಾವಿ ಪತ್ತೆಯಾಗಿದ್ದು, ಸುಮಾರು 100 ವರ್ಷಗಳಿಗೂ ಹಿಂದಿನ ಬಾವಿ ಇದೆಂದು ಹೇಳಲಾಗಿದೆ.</p>.<p>ಇತ್ತೀಚೆಗೆ ಹಂಪನಕಟ್ಟೆ ಬಳಿ ಪತ್ತೆಯಾಗಿದ್ದ ಬಾವಿಯ ಅವಧಿಯಲ್ಲೇ ಈ ಬಾವಿಯೂ ನಿರ್ಮಾಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯಲ್ಲಿ ಸುಮಾರು 20 ಅಡಿ ಆಳದಲ್ಲಿ ನೀರು ಕಂಡು ಬರುತ್ತಿದ್ದು, ಬಾವಿಯ ನಿಖರವಾದ ಆಳವನ್ನು ಅಂದಾಜಿಸಲಾಗಿಲ್ಲ.</p>.<p>‘35 ವರ್ಷಗಳ ಹಿಂದೆ ನವಭಾರತ್ ವೃತ್ತವನ್ನು ಅಭಿವೃದ್ಧಿ ಪಡಿಸಲಾಗಿತ್ತು. ಆ ಬಳಿಕ ವೃತ್ತದ ಮೇಲ್ಭಾಗವನ್ನಷ್ಟೇ ಸೌಂದರ್ಯೀಕರಣ ಮಾಡಲಾಗಿತ್ತು. ಹಿಂದೆ ವೃತ್ತದ ಅಭಿವೃದ್ಧಿಯ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಅಳವಡಿಸಿರುವ ಸಾಧ್ಯತೆ ಇದೆ. ಆದರೆ ಈ ಬಾವಿ ಎಷ್ಟು ಹಳೆಯದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಬಾವಿಯ ಅಸ್ತಿತ್ವವನ್ನು ಉಳಿಸಲು ಪ್ರಯತ್ನಿಸಲಾಗುವುದು’ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.</p>.<p>ಹಿಂದೆಲ್ಲಾ ಕೈಯಿಂದ ಮಾಡಿದ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿತ್ತು. ಹೀಗಾಗಿ ಬಾಳ್ವಿಕೆ ಹೆಚ್ಚಾಗಿದ್ದು, ಕಾಂಕ್ರಿಟೀಕರಣದ ಸಂದರ್ಭದಲ್ಲಿ ಹುದುಗಿರುವ ಈ ಬಾವಿಗಳು ಅತ್ಯಂತ ಸುರಕ್ಷಿತವಾಗಿರುವುದು ಕಂಡು ಬರುತ್ತಿದೆ ಎಂದರು.</p>.<p>ಸದ್ಯ ವೃತ್ತದ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು, ಕಾಮಗಾರಿ ಆರಂಭವಾಗಿದೆ. ಮುಂದೆ ಈ ವೃತ್ತವನ್ನು ಮಂಗಳೂರಿನ ಸೇವಾಂಜಲಿ ಚಾರಿಟಬಲ್ ಟ್ರಸ್ಟ್ನವರು ನಿರ್ವಹಣೆ ಮಾಡುವ ಬಗ್ಗೆ ಈಗಾಗಲೇ ಪಾಲಿಕೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>