‘ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅನುಸೂಚಿ 1ರಡಿ ರಕ್ಷಣೆ ಪಡೆದಿರುವ ಕಡಲಾಮೆಯ ಮೊಟ್ಟೆಗಳು ಸಸಿಹಿತ್ಲುವಿನಲ್ಲಿ ಪತ್ತೆಯಾದ ಬಳಿಕ ಅವುಗಳ ಸುತ್ತ ರಕ್ಷಣಾ ಬೇಲಿ ನಿರ್ಮಿಸಿದ್ದೆವು. ನಮ್ಮ ಇಲಾಖೆಯ ಸಿಬ್ಬಂದಿ ನಿತ್ಯ ಕಾವಲು ಕಾಯುತ್ತಿದ್ದರು. ಆಮೆ ಮರಿಗಳು ಸುರಕ್ಷಿತವಾಗಿ ಕಡಲು ಸೇರುವವರೆಗೂ ಅವುಗಳ ರಕ್ಷಣೆ ಮಾಡಿದ್ದಾರೆ’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್ ತಿಳಿಸಿದರು.