ಈ ಸಂದರ್ಭದಲ್ಲಿ ಸಾನಿಧ್ಯದ ವಿಶೇಷ ಮಕ್ಕಳು, ಶಿಕ್ಷಕರ ನೆರವಿನಿಂದ ರಚಿಸಿದ ಪೂಕಳಂನಲ್ಲಿ ಇರಿಸಲಾದ ದೀಪವನ್ನು ಡಾ. ಹರ್ಷ ಪ್ರಜ್ವಲನೆ ಮಾಡಿದರು. ಟ್ರಸ್ಟಿನ ಗೌರವ ಸಲಹೆಗಾರ್ತಿ ಶಾಲಿನಿ ಪಂಡಿತ್, ಉಪಾಧ್ಯಕ್ಷ ದೇವದತ್ತ ರಾವ್, ಖಜಾಂಚಿ ಜಗದೀಶ್ ಶೆಟ್ಟಿ, ಜತೆ ಕಾರ್ಯದರ್ಶಿ ಪ್ರೊ.ರಾಧಾಕೃಷ್ಣ, ಟ್ರಸ್ಟಿಗಳಾದ ಮೊಹಮ್ಮದ್ ಬಶೀರ್, ನಂದಕುಮಾರ್, ದಿವ್ಯಾ ಬಾಳಿಗ ವೇದಿಕೆಯಲ್ಲಿದ್ದರು. ಸಾನಿಧ್ಯದ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿ ಸ್ವಾಗತಿದರು. ಪ್ರಾಂಶುಪಾಲೆ ಮೀನಾಕ್ಷಿ ಎಂ.ಕೆ. ವಂದಿಸಿದರು. ಶಿಕ್ಷಕಿ ಸ್ಮಿತಾ ನಿರೂಪಿಸಿದರು. ವಿಶೇಷ ಮಕ್ಕಳಿಂದ ಸಾಂಪ್ರದಾಯಿಕ ನೃತ್ಯ ನಡೆಯಿತು.