ಸಿದ್ದಾಪುರ:ತೀವ್ರ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಭಾಸ್ಕರ ಹೆಗಡೆ ಎಂಬುವವರುಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಅವರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಹೊನ್ನೇಘಟಗಿ ಸಮೀಪದ ಮಳಗುಳಿಯ 64 ವರ್ಷ ವಯಸ್ಸಿನ ಇವರು ಕಳೆದ 10 ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆ ಯಿಂದ ಮಣಿಪಾಲ ಆಸ್ಪತ್ರೆ ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.