ನಗರದ ಕ್ಲಾಕ್ ಟವರ್– ಎ.ಬಿ.ಶೆಟ್ಟಿ ವೃತ್ತ– ಹ್ಯಾಮಿಲ್ಟರ್ ವೃತ್ತ– ರಾವ್ ಆ್ಯಂಡ್ ವೃತ್ತ– ಕ್ಲಾಕ್ ಟವರ್ ಮಾರ್ಗವು ಪ್ರಮುಖ ಸರ್ಕಾರಿ ಕಚೇರಿಗಳಿಗೆ ಹಾಗೂ ವಾಣಿಜ್ಯ ಕೇಂದ್ರಗಳಿಗೆ ಸಂಪರ್ಕಿಸುತ್ತದೆ. ನೆಹರೂ ಮೈದಾನ, ಕುದ್ಮುಲ್ ರಂಗರಾವ್ ಪುರಭವನ, ಸರ್ವಿಸ್ ಬಸ್ ನಿಲ್ದಾಣಗಳಿಗೆ ಸಂಪರ್ಕಿಸುವ ಈ ಮಾರ್ಗದಲ್ಲಿ ಅತ್ಯಧಿಕ ವಾಹನ ದಟ್ಟಣೆ ನಿಯಂತ್ರಿಸಲು ವಾಹನಗಳ ಏಕಮುಖ ಸಂಚಾರಕ್ಕೆ ಅನುವಾಗುವಂತೆ ವೃತ್ತಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಮಾರ್ಗದಲ್ಲಿ ವಾಹನಗಳ ಏಕಮುಖ ಸಂಚಾರ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅಧ್ಯಕ್ಷತೆಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಆ. 5ರಂದು ನಡೆದಿದ್ದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.