‘ಸರ್ಕಾರವು ಸೇವಾಸಿಂಧು ಮೂಲಕ ಬ್ಯಾಡ್ಜ್ ಹೊಂದಿದ ಚಾಲಕರು ಅರ್ಜಿ ಸಲ್ಲಿಸುವಂತೆ ಆದೇಶಿಸಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ 20 ಸಾವಿರದಷ್ಟು ಆಟೊ, ಟ್ಯಾಕ್ಸಿ ಚಾಲಕರು ಇದ್ದರೂ 6 ಸಾವಿರದಷ್ಟು ಮಂದಿ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗಿತ್ತು. ಆದರೆ, ಅರ್ಜಿ ಸಲ್ಲಿಸಿದ ಶೇ 30ರಷ್ಟು ಮಂದಿಗೂ ಇನ್ನೂ ಪರಿಹಾರ ಸಿಕ್ಕಿಲ್ಲ’ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಐವನ್ ಡಿಸೋಜ ತಿಳಿಸಿದರು.