ಇಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆರ್ಥಿಕವಾಗಿ ಹಿಂದುಳಿದವರಿಗೆ ಅವಕಾಶಗಳು ದೊರೆಯಬೇಕು. ಜಾತಿ ಆಧಾರದಲ್ಲಿ ಮೀಸಲಾತಿ ನೀಡಿದರೆ, ಸಾಮಾಜಿಕ ಪರಿವರ್ತನೆ ಕಷ್ಟಸಾಧ್ಯ. ಮೀಸಲು ಪಡೆದು ಉನ್ನತ ಸ್ಥಾನಕ್ಕೆ ತಲುಪಿದವರು ತಮ್ಮ ಸಮಾಜದ ಏಳಿಗೆಯನ್ನೇ ಮರೆಯುತ್ತಾರೆ. ಸಮಾಜ ಹಿಂದೆ ಬಿದ್ದು, ವ್ಯಕ್ತಿ ಮಾತ್ರ ಮುಂದೆ ಹೋಗುವ ವ್ಯವಸ್ಥೆಗಳು ಆಗುತ್ತಿವೆ’ ಎಂದರು.