ತುಕ್ರಪ್ಪ ಶೆಟ್ಟಿ ಅವರು ಭಾನುವಾರ ರಾತ್ರಿ ತಮ್ಮ ಮನೆಯ ಮೊದಲನೇ ಮಹಡಿಯಲ್ಲಿ ಮಲಗಿದ್ದರು. ಬೆಳಗಿನ ಜಾವ 2.15 ಕ್ಕೆ 9 ಜನ ಅಪರಿಚಿತ ಮುಸುಕುಧಾರಿಗಳು ಮನೆಗೆ ನುಗ್ಗಿದ್ದಾರೆ. ಅವರನ್ನು ತಡೆಯಲು ಯತ್ನಿಸಿದಾಗ ಹಲ್ಲೆ ನಡೆಸಿ ಚೂರಿಯನ್ನು ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಈ ವೇಳೆ ಪ್ರತಿರೋಧ ತೋರಿದ ತುಕ್ರಪ್ಪ ಶೆಟ್ಟಿಯವರ ಹೆಂಡತಿಯ ಹೊಟ್ಟೆಗೆ ಆರೋಪಿಗಳು ಚೂರಿಯಿಂದ ಇರಿದಿದ್ದಾರೆ. ಮನೆಯಲ್ಲಿದ್ದ 40 ಪವನ್ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುತ್ತಾರೆ.