<p><strong>ಬಂಟ್ವಾಳ</strong>: ಇಲ್ಲಿನ ಪೊಳಲಿ ಸಮೀಪದ ಕೆರೆದಬಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃದ್ಧಿಪಡಿಸಿದ 586ನೇ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ₹ 10 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕೆರೆ ಇದೇ 8ರಂದು ಬೆಳಿಗ್ಗೆ ಸ್ಥಳೀಯ ಕರಿಯಂಗಳ ಗ್ರಾಮ ಪಂಚಾಯಿತಿಗೆ ಹಸ್ತಾಂತರಗೊಳ್ಳಲಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಕರಿಯಂಗಳ ಗ್ರಾಮ ಪಂಚಾಯಿತಿ ಹಾಗೂ ಪೊಳಲಿ ಕೆರೆ ಅಭಿವೃದ್ಧಿ ಸಮಿತಿ ಸಹಭಾಗಿತ್ವದಲ್ಲಿ ಕೆರೆ ಪುನರ್ನಿರ್ಮಾಣಗೊಂಡಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ದಂಪತಿ ಕೆರೆ ಹಸ್ತಾಂತರಿಸುವರು ಎಂದು ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ತಿಳಿಸಿದ್ದಾರೆ.</p>.<p>ಒಟ್ಟು 7 ಎಕರೆ ಜಮೀನು ಮೀಸಲಿರಿಸಿದ್ದು 5 ಎಕರೆ ಪ್ರದೇಶದಲ್ಲಿ ಕೆರೆ ಇದೆ. ಇದರಿಂದಾಗಿ ಸ್ಥಳೀಯ ಕೃಷಿಕರಿಗೆ ಅನುಕೂಲಕರವಾಗಲಿದೆ. ಕೆರೆ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಪಂಚಾಯಿತಿ ವಿವಿಧ ಮೂಲಗಳಿಂದ ಒಟ್ಟು ₹ 39 ಲಕ್ಷ ಅನುದಾನ ವಿನಿಯೋಗಿಸಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ 'ಪ್ರಜಾವಾಣಿ'ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಇಲ್ಲಿನ ಪೊಳಲಿ ಸಮೀಪದ ಕೆರೆದಬಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಭಿವೃದ್ಧಿಪಡಿಸಿದ 586ನೇ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ₹ 10 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕೆರೆ ಇದೇ 8ರಂದು ಬೆಳಿಗ್ಗೆ ಸ್ಥಳೀಯ ಕರಿಯಂಗಳ ಗ್ರಾಮ ಪಂಚಾಯಿತಿಗೆ ಹಸ್ತಾಂತರಗೊಳ್ಳಲಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಕರಿಯಂಗಳ ಗ್ರಾಮ ಪಂಚಾಯಿತಿ ಹಾಗೂ ಪೊಳಲಿ ಕೆರೆ ಅಭಿವೃದ್ಧಿ ಸಮಿತಿ ಸಹಭಾಗಿತ್ವದಲ್ಲಿ ಕೆರೆ ಪುನರ್ನಿರ್ಮಾಣಗೊಂಡಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ದಂಪತಿ ಕೆರೆ ಹಸ್ತಾಂತರಿಸುವರು ಎಂದು ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ತಿಳಿಸಿದ್ದಾರೆ.</p>.<p>ಒಟ್ಟು 7 ಎಕರೆ ಜಮೀನು ಮೀಸಲಿರಿಸಿದ್ದು 5 ಎಕರೆ ಪ್ರದೇಶದಲ್ಲಿ ಕೆರೆ ಇದೆ. ಇದರಿಂದಾಗಿ ಸ್ಥಳೀಯ ಕೃಷಿಕರಿಗೆ ಅನುಕೂಲಕರವಾಗಲಿದೆ. ಕೆರೆ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಪಂಚಾಯಿತಿ ವಿವಿಧ ಮೂಲಗಳಿಂದ ಒಟ್ಟು ₹ 39 ಲಕ್ಷ ಅನುದಾನ ವಿನಿಯೋಗಿಸಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ 'ಪ್ರಜಾವಾಣಿ'ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>