ಮಂಗಳೂರು: ‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಗೆ ಒಳಪಡಿಸುವಂತೆ ಒತ್ತಾಯಿಸಿ ಇದೇ 28ರಂದು ಬೆಂಗಳೂರು ಚಲೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ನಗರ ಸ್ಥಳಿಯ ಸಂಸ್ಥೆಗಳಿಂದ 200 ಮಂದಿ ಭಾಗವಹಿಸಲಿದ್ದಾರೆ’ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ.ಕೆ.ಅಣ್ಣಪ್ಪ ತಿಳಿಸಿದರು.