ತೊಕ್ಕೊಟ್ಟು ಮತ್ತು ಪಂಪ್ವೆಲ್ನಲ್ಲಿ ಮೇಲುಸೇತುವೆ ಕಾಮಗಾರಿ ಆರಂಭಗೊಂಡು 8 ವರ್ಷ ಕಳೆದಿದೆ. ನಾನಾ ಕಾರಣಗಳಿಗೆ ಈಗಾಗಲೇ ಗುತ್ತಿಗೆ ಸಂಸ್ಥೆಗೆ ಸಾಕಷ್ಟು ಕಾಲಾವಕಾಶವನ್ನು ನೀಡಲಾಗಿದೆ. ಆದರೂ ಕಾಮಗಾರಿ ಮುಗಿದಿಲ್ಲ. ಚರಂಡಿ, ಸರ್ವೀಸ್ ರಸ್ತೆ ಕಾಮಗಾರಿಯನ್ನು ಸರಿಯಾಗಿ ನಡೆಸದ ಬಗ್ಗೆ ಜನರಿಂದ ಆರೋಪಗಳು ಕೇಳಿಬರುತ್ತಿದೆ.ವಿಳಂಬವಾಗಲು ಅವಕಾಶ ನೀಡುವುದಿಲ್ಲ ಎಂದರು.
‘ ಎರಡು ಕಡೆಗಳಲ್ಲಿ ಮೇಲ್ಸೇತುವೆ ಪೂರ್ಣಗೊಳ್ಳುವವರೆಗೆ ಸ್ಥಳೀಯ ವಾಹನಗಳಿಗೆ ಟೋಲ್ನಿಂದ ವಿನಾಯಿತಿ ನೀಡಬೇಕು’ ಎಂದು ಟೋಲ್ ಸಂಗ್ರಹ ಕೇಂದ್ರಕ್ಕೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಅವರು ಗುತ್ತಿಗೆ ಸಂಸ್ಥೆಯ ಯೋಜನಾ ನಿರ್ದೇಶಕ ಶಂಕರ್ ಅವರಿಗೆ ಸೂಚನೆ ನೀಡಿದರು. ತಲಪಾಡಿ ಸರ್ವೀಸ್ ರಸ್ತೆ ರಚನೆ, ಕಾಲುದಾರಿಗೆ ಅವಕಾಶ , ಉಚ್ಚಿಲದಲ್ಲಿ ಸರ್ವೀಸ್ ರಸ್ತೆ , ಚರಂಡಿಯ ಹೂಳೆತ್ತುವಿಕೆ ನಡೆಸುವಂತೆ ಗುತ್ತಿಗೆ ಸಂಸ್ಥೆಯ ಮುಖ್ಯ ಎಂಜಿನಿಯರ್ ರವಿ ಕುಮಾರ್ಗೆ ಹೇಳಿದರು.
ಎನ್ಎಚ್ಎಐ ಅಧಿಕಾರಿ ಅಜಿತ್, ಮುಖಂಡರಾದ ಸಂತೋಷ್ ಬೋಳಿಯಾರ್, ಸತೀಶ್ ಕುಂಪಲ, ಲಲಿತಾ ಸುಂದರ್ ತೊಕ್ಕೊಟ್ಟು ಉಪಸ್ಥಿತರಿದ್ದರು.