ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕೇಂದ್ರಕ್ಕೆ ಆಮ್ಲಜನಕ ಸಿಲಿಂಡರ್

Last Updated 6 ಜೂನ್ 2021, 5:18 IST
ಅಕ್ಷರ ಗಾತ್ರ

ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೀರಾ ಅಗತ್ಯ ಇರುವ ಎರಡು ಆಮ್ಲಜನಕ ಜಂಬೊ ಸಿಲಿಂಡರ್ ಸಹಿತ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು ಈ ಸಾಮಗ್ರಿಗಳನ್ನು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ವೇದಾವತಿ ಅವರಿಗೆ ಹಸ್ತಾಂತರಿಸಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಎಂ ಎಸ್ ಮಹಮ್ಮದ್, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಪ್ರಮುಖರಾದ ಉಮನಾಥ ಶೆಟ್ಟಿ, ಅಶ್ರಫ್‌ ಬಸ್ತಿಕಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕುಲ್ ಅಕ್ಬರ್, ಸಂತೋಷ್ ಭಂಡಾರಿ ಚಿಲಿಮ್ಮೆತ್ತಾರ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿಕೆಎಂ ಅಶ್ರಫ್, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷೆ ನೆಬಿಸಾ, ಪದ್ಮನಾಭ ಪೂಜಾರಿ ಅಳಿಕೆ, ಪಟ್ಟಣ ಪಂಚಾಯಿತಿ ಸದಸ್ಯರಾದ ಹಸೈನಾರ್ ನೆಲ್ಲಿಗುಡ್ಡೆ, ಸುನೀತಾ ಕೋಟ್ಯಾನ್, ಎಂ.ಕೆ ಮೂಸಾ, ಜಯಪ್ರಕಾಶ್ ಬದಿನಾರ್, ರವೀಂದ್ರ ಗೌಡ, ಸೀತಾರಾಮ ಶೆಟ್ಟಿ ಅಳಿಕೆ, ಪಂಚಪಾಲ ಶೆಟ್ಟಿ ಪೆರುವಾಯಿ, ಅಶೋಕ ಡಿಸಿಲ್ವ, ಶ್ರೀಧರ್ ಬಾಳೆಕಲ್ಲು, ಶ್ರೀಧರ್ ಶೆಟ್ಟಿ ಪುಣಚ, ಎಲ್ಯಣ್ಣ ಪೂಜಾರಿ, ಕರೀಂ ಕುದ್ದುಪದವು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT