ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ: ಆಮ್ಲಜನಕ ಘಟಕ ಲೋಕಾರ್ಪಣೆ

ಪ್ರತಿ ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ
Last Updated 14 ಜುಲೈ 2021, 4:31 IST
ಅಕ್ಷರ ಗಾತ್ರ

ಬಂಟ್ವಾಳ: ‘ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ₹ 1.40 ಕೋಟಿ ವೆಚ್ಚದ ಆಮ್ಲಜನಕ ಘಟಕವು ಪ್ರತಿ ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಇದರಿಂದ ಹತ್ತಿರದ ಆಸ್ಪತ್ರೆಗಳಿಗೂ ಅನುಕೂಲವಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸಿಎಸ್‌ಆರ್ ಅನುದಾನದಲ್ಲಿ ಅನುಷ್ಠಾನ ಗೊಂಡ ಆಮ್ಲಜನಕ ಘಟಕವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು ಶುಭ ಹಾರೈಸಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯರಾದ ಹರಿಪ್ರಸಾದ್, ರೇಖಾ ಪೈ, ಮೀನಾಕ್ಷಿ ಗೌಡ, ಶಶಿಕಲಾ ಬಿ., ದೇವಕಿ, ಚೈತನ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಜಯಂತಿ, ಬಿಜೆಪಿ ಕ್ಷೇತ್ರಾಧ್ಯಕ್ಷ
ದೇವಪ್ಪ ಪೂಜಾರಿ, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ರಾಮದಾಸ್ ಬಂಟ್ವಾಳ, ಎ.ಗೋವಿಂದ ಪ್ರಭು, ಮಾಧವ ಎಸ್.ಮಾವೆ, ಸುದರ್ಶನ್ ಬಜ, ಪ್ರಕಾಶ್ ಅಂಚನ್, ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರದೀಪ್ ಕುಮಾರ್ ಅಜ್ಜಿಬೆಟ್ಟು, ಯಶವಂತ ನಗ್ರಿ, ಕೇಶವ ದೈಪಲ, ಪುಷ್ಪರಾಜ್ ಚೌಟ, ಚಿದಾನಂದ ರೈ ಕಕ್ಯ, ಯಶೋಧರ ಕರ್ಬೆಟ್ಟು, ಆನಂದ ಶಂಭೂರು, ರೊನಾಲ್ಡ್ ಡಿಸೋಜ ಅಮ್ಟಾಡಿ, ಹರ್ಷಿಣಿ ಪುಷ್ಪಾನಂದ, ಮಹೇಶ್ ಶೆಟ್ಟಿ, ಉಮೇಶ್ ಅರಳ, ಮೋನಪ್ಪ ದೇವಸ್ಯ, ಸುರೇಶ ಕೋಟ್ಯಾನ್, ಸದಾಶಿವ ಶೆಣೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT