<p><strong>ಮಂಗಳೂರು</strong>: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಕಲ್ಪಿಸಿದೆ.</p>.<p>ಜೂನ್ ಮೊದಲ ವಾರದಿಂದ ಮುಂಗಾರು ಪ್ರಾರಂಭವಾಗುವ ನಿರೀಕ್ಷೆ ಇದೆ. ಕೃಷಿ ಇಲಾಖೆಯು ರಾಜ್ಯ ಬೀಜ ನಿಗಮದಿಂದ ಪ್ರಮಾಣೀಕೃತವಾದ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ಸಹಾಯಧನದಲ್ಲಿ ಒದಗಿಸಲಾಗುತ್ತಿದೆ.</p>.<p>ಜಿಲ್ಲೆಯಲ್ಲಿ ಸಹ್ಯಾದ್ರಿ ಕೆಂಪುಮುಕ್ತಿ ತಳಿಯನ್ನು ಹೊಸದಾಗಿ ಬಿತ್ತನೆಗೆ ಪರಿಚಯಿಸಲಾಗುತ್ತಿದ್ದು, ಇದು ಜ್ಯೋತಿ ತಳಿಗೆ ಪರ್ಯಾಯವಾದ ಕೆಂಪಕ್ಕಿ ತಳಿಯಾಗಿದೆ. ಸಹ್ಯಾದ್ರಿ ಕೆಂಪುಮುಕ್ತಿಯು ಅಧಿಕ ಇಳುವರಿ, ಬೆಂಕಿ ಮತ್ತು ಊದುಬತ್ತ ರೋಗ ನಿರೋಧಕ ಮುಂತಾದ ಗುಣಲಕ್ಷಣಗಳನ್ನು ಹೊಂದಿದೆ. ಎಕರೆಗೆ ಅಂದಾಜು 20-25 ಕ್ವಿಂಟಲ್ ಇಳುವರಿ ನೀಡುತ್ತದೆ. ಎಂಒ-4 ತಳಿಗೆ ಹೋಲಿಸಿದರೆ ಸಹ್ಯಾದ್ರಿ ಕೆಂಪುಮುಕ್ತಿಯು 8 ರಿಂದ 10 ದಿನಗಳು ಮುಂಚಿತವಾಗಿ ಕಟಾವಿಗೆ ಬರುತ್ತದೆ.</p>.<p>ಜಿಲ್ಲೆಯಲ್ಲಿ ಕೆಂಪಕ್ಕಿ ತಳಿಯ ಭತ್ತದ ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಇde. ರಾಜ್ಯ ಬೀಜ ನಿಗಮದಲ್ಲಿ ಲಭ್ಯವಿರುವ ಕೆಂಪಕ್ಕಿ ತಳಿಗಳಾದ ಜಯ (140-150 ದಿನಗಳು) 60.5 ಕ್ವಿಂಟಲ್, ಜ್ಯೋತಿ (115-120 ದಿನಗಳು) 65.5 ಕ್ವಿಂಟಲ್, ಎಂಒ-4 (130-135ದಿನಗಳು) 198 ಕ್ವಿಂಟಲ್ ಮತ್ತು ಸಹ್ಯಾದ್ರಿ ಕೆಂಪುಮುಕ್ತಿ (120-125 ದಿನಗಳು) 180 ಕ್ವಿಂಟಲ್ ಭತ್ತದ ಬಿತ್ತನೆ ಬೀಜ ದಾಸ್ತಾನು ಮಾಡಲು ಕ್ರಮವಹಿಸಲಾಗಿದೆ. </p>.<p>ರೈತ ಸಂಪರ್ಕ ಕೇಂದ್ರದಲ್ಲಿ ಎಂಒ-4 ತಳಿಯ 112 ಕ್ವಿಂಟಲ್, ಸಹ್ಯಾದ್ರಿ ಕೆಂಪುಮುಕ್ತಿ 80 ಕ್ವಿಂಟಲ್, ಜಯ 28.25 ಕ್ವಿಂಟಲ್, ಜ್ಯೋತಿ – 26 ಕ್ವಿಂಟಲ್ ದಾಸ್ತಾನಿದೆ. ರೈತ ಸಂಪರ್ಕ ಕೇಂದ್ರಗಳಿಂದ ಬಿತ್ತನೆ ಬೀಜ ಪಡೆಯುವ ರೈತರು ವಿವಿಧ ತಳಿಯ ಭತ್ತ ಬೆಳೆಯುವ ಅವಧಿ, ಬೇಸಾಯ ಕ್ರಮ ಹಾಗೂ ಸಸ್ಯ ಸಂರಕ್ಷಣಾ ವಿಧಾನಗಳ ಮಾಹಿತಿ ಪಡೆದು ಅದಕ್ಕನುಗುಣವಾಗಿ ಬಿತ್ತನೆಗೆ ಉಪಯೋಗಿಸಬೇಕು.</p>.<p>ಮೇ ಅಂತ್ಯದವಗೆ ರಸಗೊಬ್ಬರದ ಬೇಡಿಕೆ 6,772 ಟನ್ ಗಳಷ್ಟಿದೆ. ಕಾಪು ದಾಸ್ತಾನಿನ ಸೇರಿದಂತೆ ಜಿಲ್ಲೆಯ ವಿವಿಧ ಸಹಕಾರಿ ಹಾಗೂ ಖಾಸಗಿ ಮಾರಾಟ ಮಳಿಗೆಗಳಲ್ಲಿ 14,608 ಟನ್ ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಕಲ್ಪಿಸಿದೆ.</p>.<p>ಜೂನ್ ಮೊದಲ ವಾರದಿಂದ ಮುಂಗಾರು ಪ್ರಾರಂಭವಾಗುವ ನಿರೀಕ್ಷೆ ಇದೆ. ಕೃಷಿ ಇಲಾಖೆಯು ರಾಜ್ಯ ಬೀಜ ನಿಗಮದಿಂದ ಪ್ರಮಾಣೀಕೃತವಾದ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ಸಹಾಯಧನದಲ್ಲಿ ಒದಗಿಸಲಾಗುತ್ತಿದೆ.</p>.<p>ಜಿಲ್ಲೆಯಲ್ಲಿ ಸಹ್ಯಾದ್ರಿ ಕೆಂಪುಮುಕ್ತಿ ತಳಿಯನ್ನು ಹೊಸದಾಗಿ ಬಿತ್ತನೆಗೆ ಪರಿಚಯಿಸಲಾಗುತ್ತಿದ್ದು, ಇದು ಜ್ಯೋತಿ ತಳಿಗೆ ಪರ್ಯಾಯವಾದ ಕೆಂಪಕ್ಕಿ ತಳಿಯಾಗಿದೆ. ಸಹ್ಯಾದ್ರಿ ಕೆಂಪುಮುಕ್ತಿಯು ಅಧಿಕ ಇಳುವರಿ, ಬೆಂಕಿ ಮತ್ತು ಊದುಬತ್ತ ರೋಗ ನಿರೋಧಕ ಮುಂತಾದ ಗುಣಲಕ್ಷಣಗಳನ್ನು ಹೊಂದಿದೆ. ಎಕರೆಗೆ ಅಂದಾಜು 20-25 ಕ್ವಿಂಟಲ್ ಇಳುವರಿ ನೀಡುತ್ತದೆ. ಎಂಒ-4 ತಳಿಗೆ ಹೋಲಿಸಿದರೆ ಸಹ್ಯಾದ್ರಿ ಕೆಂಪುಮುಕ್ತಿಯು 8 ರಿಂದ 10 ದಿನಗಳು ಮುಂಚಿತವಾಗಿ ಕಟಾವಿಗೆ ಬರುತ್ತದೆ.</p>.<p>ಜಿಲ್ಲೆಯಲ್ಲಿ ಕೆಂಪಕ್ಕಿ ತಳಿಯ ಭತ್ತದ ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಇde. ರಾಜ್ಯ ಬೀಜ ನಿಗಮದಲ್ಲಿ ಲಭ್ಯವಿರುವ ಕೆಂಪಕ್ಕಿ ತಳಿಗಳಾದ ಜಯ (140-150 ದಿನಗಳು) 60.5 ಕ್ವಿಂಟಲ್, ಜ್ಯೋತಿ (115-120 ದಿನಗಳು) 65.5 ಕ್ವಿಂಟಲ್, ಎಂಒ-4 (130-135ದಿನಗಳು) 198 ಕ್ವಿಂಟಲ್ ಮತ್ತು ಸಹ್ಯಾದ್ರಿ ಕೆಂಪುಮುಕ್ತಿ (120-125 ದಿನಗಳು) 180 ಕ್ವಿಂಟಲ್ ಭತ್ತದ ಬಿತ್ತನೆ ಬೀಜ ದಾಸ್ತಾನು ಮಾಡಲು ಕ್ರಮವಹಿಸಲಾಗಿದೆ. </p>.<p>ರೈತ ಸಂಪರ್ಕ ಕೇಂದ್ರದಲ್ಲಿ ಎಂಒ-4 ತಳಿಯ 112 ಕ್ವಿಂಟಲ್, ಸಹ್ಯಾದ್ರಿ ಕೆಂಪುಮುಕ್ತಿ 80 ಕ್ವಿಂಟಲ್, ಜಯ 28.25 ಕ್ವಿಂಟಲ್, ಜ್ಯೋತಿ – 26 ಕ್ವಿಂಟಲ್ ದಾಸ್ತಾನಿದೆ. ರೈತ ಸಂಪರ್ಕ ಕೇಂದ್ರಗಳಿಂದ ಬಿತ್ತನೆ ಬೀಜ ಪಡೆಯುವ ರೈತರು ವಿವಿಧ ತಳಿಯ ಭತ್ತ ಬೆಳೆಯುವ ಅವಧಿ, ಬೇಸಾಯ ಕ್ರಮ ಹಾಗೂ ಸಸ್ಯ ಸಂರಕ್ಷಣಾ ವಿಧಾನಗಳ ಮಾಹಿತಿ ಪಡೆದು ಅದಕ್ಕನುಗುಣವಾಗಿ ಬಿತ್ತನೆಗೆ ಉಪಯೋಗಿಸಬೇಕು.</p>.<p>ಮೇ ಅಂತ್ಯದವಗೆ ರಸಗೊಬ್ಬರದ ಬೇಡಿಕೆ 6,772 ಟನ್ ಗಳಷ್ಟಿದೆ. ಕಾಪು ದಾಸ್ತಾನಿನ ಸೇರಿದಂತೆ ಜಿಲ್ಲೆಯ ವಿವಿಧ ಸಹಕಾರಿ ಹಾಗೂ ಖಾಸಗಿ ಮಾರಾಟ ಮಳಿಗೆಗಳಲ್ಲಿ 14,608 ಟನ್ ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>