ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರು ಪಡೀಲ್ ಬಳಿ ಗಸ್ತು ಕಾರ್ಯದಲ್ಲಿ ನಿರತರಾಗಿದ್ದಾಗ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಣ್ಣೂರು ಕಡೆಯಿಂದ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಂದಿತ್ತು. ಪಡೀಲ್ ಮೇಲ್ಸೇತುವೆ ಬಳಿ ಮಿನಿ ಟಿಪ್ಪರ್ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಅದರಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದುದು ಕಂಡುಬಂದಿತ್ತು.