<figcaption>""</figcaption>.<p><strong>ಬೆಳ್ತಂಗಡಿ: </strong>ತಾಲ್ಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮ ನಡ್ತಿಕಲ್ಲಿನ ದಾಡೇಲು ಬಳಿ ಫಲ್ಗುಣಿ ನದಿಗೆ ವಿಷ ಹಾಕಿ ಮೀನುಗಳ ಸಾವಿಗೆ ಕಾರಣರಾದ ಆರೋಪದಲ್ಲಿ ಮೂಡುಕೋಡಿ ಗ್ರಾಮದ ಇರ್ಷಾದ್ ಹಾಗೂ ಮಹಮ್ಮದ್ ಹನೀಫ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇವರು ಆಟೊ ಚಾಲಕರಾಗಿದ್ದಾರೆ. ಏಪ್ರಿಲ್ 30ರಂದು ಫಲ್ಗುಣಿ ನದಿಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಸಾವಿಗೆ ಕಾರಣರಾಗಿದ್ದರು. ಸತ್ತ ಮೀನುಗಳು ನೀರಿನ ಮೇಲ್ಭಾಗದಲ್ಲಿ ತೇಲಾಡುತ್ತಿದ್ದವು. ಪರಿಸರದಲ್ಲಿ ದಟ್ಟ ವಾಸನೆಯ ಜೊತೆಗೆ ಅನೇಕ ಪ್ರಾಣಿ-ಪಕ್ಷಿಗಳು ತಿನ್ನಲು ಬರುತ್ತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.</p>.<p>ಆರೋಪಿಗಳ ನದಿಗೆ ಏಕೆ ವಿಷ ಹಾಕಿದರು ಎಂಬ ಬಗ್ಗೆ ಕಾರಣ ಇನ್ನೂ ತಿಳಿದುಬಂದಿಲ್ಲ.</p>.<p><strong>ನದಿ ದಡದಲ್ಲಿ ರಾಶಿರಾಶಿ ಮೀನು</strong></p>.<p>ಏಪ್ರಿಲ್ 30ರ (ಗುರುವಾರ)ರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಶುಕ್ರವಾರ ಮುಂಜಾನೆ ನದಿಯ ದಡದಲ್ಲಿ ರಾಶಿರಾಶಿ ಮೀನುಗಳು ಸತ್ತು ಬಿದ್ದಿದ್ದವು. ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿ, ರೋಗ ಹರಡುವ ಭೀತಿ ಎದುರಾಗಿತ್ತು. ಪರಿಸರದ ಸುತ್ತಮುತ್ತಲಿನ ಜನ ಭಯಬೀತರಾಗಿದ್ದರು.</p>.<p>ನದಿಗೆವಿಷಹಾಕಿರುವುದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕೆಲಸ ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಒಂದು ವೇಳೆ ಸರಿಯಾದ ಶಿಕ್ಷೆ ಆಗದೇ ಇದ್ದಲ್ಲಿ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದರು.</p>.<div style="text-align:center"><figcaption><em><strong>ವಿಷ ಪ್ರಾಶನದ ನಂತರ ಫಲ್ಗುಣಿ ನದಿಯ ದಂಡೆಯಲ್ಲಿ ತೇಲುತ್ತಿದ್ದ ಸತ್ತ ಮೀನುಗಳು</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಳ್ತಂಗಡಿ: </strong>ತಾಲ್ಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮ ನಡ್ತಿಕಲ್ಲಿನ ದಾಡೇಲು ಬಳಿ ಫಲ್ಗುಣಿ ನದಿಗೆ ವಿಷ ಹಾಕಿ ಮೀನುಗಳ ಸಾವಿಗೆ ಕಾರಣರಾದ ಆರೋಪದಲ್ಲಿ ಮೂಡುಕೋಡಿ ಗ್ರಾಮದ ಇರ್ಷಾದ್ ಹಾಗೂ ಮಹಮ್ಮದ್ ಹನೀಫ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇವರು ಆಟೊ ಚಾಲಕರಾಗಿದ್ದಾರೆ. ಏಪ್ರಿಲ್ 30ರಂದು ಫಲ್ಗುಣಿ ನದಿಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಸಾವಿಗೆ ಕಾರಣರಾಗಿದ್ದರು. ಸತ್ತ ಮೀನುಗಳು ನೀರಿನ ಮೇಲ್ಭಾಗದಲ್ಲಿ ತೇಲಾಡುತ್ತಿದ್ದವು. ಪರಿಸರದಲ್ಲಿ ದಟ್ಟ ವಾಸನೆಯ ಜೊತೆಗೆ ಅನೇಕ ಪ್ರಾಣಿ-ಪಕ್ಷಿಗಳು ತಿನ್ನಲು ಬರುತ್ತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.</p>.<p>ಆರೋಪಿಗಳ ನದಿಗೆ ಏಕೆ ವಿಷ ಹಾಕಿದರು ಎಂಬ ಬಗ್ಗೆ ಕಾರಣ ಇನ್ನೂ ತಿಳಿದುಬಂದಿಲ್ಲ.</p>.<p><strong>ನದಿ ದಡದಲ್ಲಿ ರಾಶಿರಾಶಿ ಮೀನು</strong></p>.<p>ಏಪ್ರಿಲ್ 30ರ (ಗುರುವಾರ)ರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಶುಕ್ರವಾರ ಮುಂಜಾನೆ ನದಿಯ ದಡದಲ್ಲಿ ರಾಶಿರಾಶಿ ಮೀನುಗಳು ಸತ್ತು ಬಿದ್ದಿದ್ದವು. ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿ, ರೋಗ ಹರಡುವ ಭೀತಿ ಎದುರಾಗಿತ್ತು. ಪರಿಸರದ ಸುತ್ತಮುತ್ತಲಿನ ಜನ ಭಯಬೀತರಾಗಿದ್ದರು.</p>.<p>ನದಿಗೆವಿಷಹಾಕಿರುವುದರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕೆಲಸ ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಒಂದು ವೇಳೆ ಸರಿಯಾದ ಶಿಕ್ಷೆ ಆಗದೇ ಇದ್ದಲ್ಲಿ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದರು.</p>.<div style="text-align:center"><figcaption><em><strong>ವಿಷ ಪ್ರಾಶನದ ನಂತರ ಫಲ್ಗುಣಿ ನದಿಯ ದಂಡೆಯಲ್ಲಿ ತೇಲುತ್ತಿದ್ದ ಸತ್ತ ಮೀನುಗಳು</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>