ಇವರು ಆಟೊ ಚಾಲಕರಾಗಿದ್ದಾರೆ. ಏಪ್ರಿಲ್ 30ರಂದು ಫಲ್ಗುಣಿ ನದಿಗೆ ವಿಷ ಹಾಕಿ ಲಕ್ಷಾಂತರ ಮೀನುಗಳ ಸಾವಿಗೆ ಕಾರಣರಾಗಿದ್ದರು. ಸತ್ತ ಮೀನುಗಳು ನೀರಿನ ಮೇಲ್ಭಾಗದಲ್ಲಿ ತೇಲಾಡುತ್ತಿದ್ದವು. ಪರಿಸರದಲ್ಲಿ ದಟ್ಟ ವಾಸನೆಯ ಜೊತೆಗೆ ಅನೇಕ ಪ್ರಾಣಿ-ಪಕ್ಷಿಗಳು ತಿನ್ನಲು ಬರುತ್ತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.