<p><strong>ಮಂಗಳೂರು:</strong> ಕೋವಿಡ್ ಸಂಕಷ್ಟದ ನಡುವೆ ರಾಜ್ಯದ ಹಲವೆಡೆ ರೈತರು ತಾವು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೆ ಹಣ್ಣು, ತರಕಾರಿಗಳನ್ನು ಬೀದಿಗೆ ಎಸೆಯುತ್ತಿದ್ದು, ಅಂತಹ ರೈತರಿಗೆ ಸೂಕ್ತ ಬೆಲೆ ನೀಡಿ ಖರೀದಿಸುವ ಮೂಲಕ ಅವರಿಗೆ ಸಹಾಯ ನೀಡಲು ‘ಪನಮಾ ನೇಚರ್ ಫ್ರೆಶ್’ ಸಂಸ್ಥೆಯ ಅಧ್ಯಕ್ಷ ವಿವೇಕ್ ರಾಜ್ ಮುಂದಾಗಿದ್ದಾರೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಸಂಸ್ಥೆಯು ಹೊಂದಿರುವ 13 ಕ್ಲೈಮೇಟ್ ಕಂಟೇನರ್ಗಳ ಮೂಲಕ ರಾಜ್ಯದ ವಿವಿಧ ಭಾಗಗಳ ರೈತರಿಂದ ಹಣ್ಣು, ತರಕಾರಿಗಳನ್ನು ಖರೀದಿಸಲಾಗುವುದು. ಇದಕ್ಕಾಗಿಯೇ ₹75 ಕೋಟಿ ಮೀಸಲಿಡಲಾಗಿದೆ’ ಎಂದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವ 5 ಸಾವಿರ ಕುಟುಂಬಕ್ಕೆ ಕಿಟ್ ಒದಗಿಸುವ ನಿಟ್ಟಿನಲ್ಲಿ ₹50 ಲಕ್ಷ ಮೀಸಲಿಡಲಾಗಿದೆ. ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗವಾಗಬಲ್ಲ ಕಿಟ್ ಇದಾಗಿದೆ. ಹಲವು ಬಡ ಕುಟುಂಬಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚವನ್ನು ಪನಾಮ ಕಂಪನಿ ವತಿಯಿಂದ ಭರಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕೋವಿಡ್ ಸಂಕಷ್ಟದ ನಡುವೆ ರಾಜ್ಯದ ಹಲವೆಡೆ ರೈತರು ತಾವು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೆ ಹಣ್ಣು, ತರಕಾರಿಗಳನ್ನು ಬೀದಿಗೆ ಎಸೆಯುತ್ತಿದ್ದು, ಅಂತಹ ರೈತರಿಗೆ ಸೂಕ್ತ ಬೆಲೆ ನೀಡಿ ಖರೀದಿಸುವ ಮೂಲಕ ಅವರಿಗೆ ಸಹಾಯ ನೀಡಲು ‘ಪನಮಾ ನೇಚರ್ ಫ್ರೆಶ್’ ಸಂಸ್ಥೆಯ ಅಧ್ಯಕ್ಷ ವಿವೇಕ್ ರಾಜ್ ಮುಂದಾಗಿದ್ದಾರೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಅವರು, ‘ಸಂಸ್ಥೆಯು ಹೊಂದಿರುವ 13 ಕ್ಲೈಮೇಟ್ ಕಂಟೇನರ್ಗಳ ಮೂಲಕ ರಾಜ್ಯದ ವಿವಿಧ ಭಾಗಗಳ ರೈತರಿಂದ ಹಣ್ಣು, ತರಕಾರಿಗಳನ್ನು ಖರೀದಿಸಲಾಗುವುದು. ಇದಕ್ಕಾಗಿಯೇ ₹75 ಕೋಟಿ ಮೀಸಲಿಡಲಾಗಿದೆ’ ಎಂದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಕಷ್ಟದಲ್ಲಿರುವ 5 ಸಾವಿರ ಕುಟುಂಬಕ್ಕೆ ಕಿಟ್ ಒದಗಿಸುವ ನಿಟ್ಟಿನಲ್ಲಿ ₹50 ಲಕ್ಷ ಮೀಸಲಿಡಲಾಗಿದೆ. ಒಂದು ಕುಟುಂಬಕ್ಕೆ 15 ದಿನಗಳ ಕಾಲ ಉಪಯೋಗವಾಗಬಲ್ಲ ಕಿಟ್ ಇದಾಗಿದೆ. ಹಲವು ಬಡ ಕುಟುಂಬಗಳ ಆಸ್ಪತ್ರೆ ಚಿಕಿತ್ಸೆಯ ವೆಚ್ಚವನ್ನು ಪನಾಮ ಕಂಪನಿ ವತಿಯಿಂದ ಭರಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>