<p><strong>ಮಂಗಳೂರು: </strong>ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಬಳಕೆ ಜಾಲದ ಆರೋಪಿಗಳ ಪರೇಡ್ ಸೋಮವಾರ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆಯಿತು.</p>.<p>ಒಟ್ಟು180 ಮಂದಿ ಆರೋಪಿಗಳಿಗೆ ಪರೇಡ್ ಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಇದರಲ್ಲಿ 90 ಮಂದಿ ಹಾಜರಾಗಿದ್ದರು. ಇವರಲ್ಲಿ 6 ವಿದ್ಯಾರ್ಥಿಗಳಿದ್ದರು.</p>.<p>ಕಳೆದ ವರ್ಷ ಜಿಲ್ಲೆಯಲ್ಲಿ 4 ಮಂದಿ ಮೇಲೆ ಗೂಂಡಾ ಕಾಯ್ದೆ ಹಾಕುವಂತೆ ಪ್ರಸ್ತಾವ ಕಳುಹಿಸಲಾಗಿತ್ತು. ಇವರಲ್ಲಿ ಒಬ್ಬರ ಮೇಲೆ ಗೂಂಡಾ ಕಾಯಿದೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.</p>.<p>ಆರೋಪಿಗಳಿಗೆ ಕಠಿಣ ಎಚ್ಚರಿಕೆ ನೀಡಿದ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಶ್, ದಂಧೆಯನ್ನು ಪುನರಾವರ್ತಿಸಿದರೆ ಆಸ್ತಿ ಮಟ್ಟ ಹಾಕುವುದಾಗಿ ತಿಳಿಸಿದರು.</p>.<p>ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ತನಿಖೆ ನಡೆಯುತ್ತಿರುವ ಕಾರಣ, ಡ್ರಗ್ಸ್ ಜಾಲದಲ್ಲಿ ಮಂಗಳೂರು ನಂಟಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ತಪಾಸಣೆ, ತನಿಖೆ, ಜಾಗೃತಿ ಕಾರ್ಯ ಗಳನ್ನು ತೀವ್ರ ಗೊಳಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಬಳಕೆ ಜಾಲದ ಆರೋಪಿಗಳ ಪರೇಡ್ ಸೋಮವಾರ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆಯಿತು.</p>.<p>ಒಟ್ಟು180 ಮಂದಿ ಆರೋಪಿಗಳಿಗೆ ಪರೇಡ್ ಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಇದರಲ್ಲಿ 90 ಮಂದಿ ಹಾಜರಾಗಿದ್ದರು. ಇವರಲ್ಲಿ 6 ವಿದ್ಯಾರ್ಥಿಗಳಿದ್ದರು.</p>.<p>ಕಳೆದ ವರ್ಷ ಜಿಲ್ಲೆಯಲ್ಲಿ 4 ಮಂದಿ ಮೇಲೆ ಗೂಂಡಾ ಕಾಯ್ದೆ ಹಾಕುವಂತೆ ಪ್ರಸ್ತಾವ ಕಳುಹಿಸಲಾಗಿತ್ತು. ಇವರಲ್ಲಿ ಒಬ್ಬರ ಮೇಲೆ ಗೂಂಡಾ ಕಾಯಿದೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.</p>.<p>ಆರೋಪಿಗಳಿಗೆ ಕಠಿಣ ಎಚ್ಚರಿಕೆ ನೀಡಿದ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಶ್, ದಂಧೆಯನ್ನು ಪುನರಾವರ್ತಿಸಿದರೆ ಆಸ್ತಿ ಮಟ್ಟ ಹಾಕುವುದಾಗಿ ತಿಳಿಸಿದರು.</p>.<p>ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದ ತನಿಖೆ ನಡೆಯುತ್ತಿರುವ ಕಾರಣ, ಡ್ರಗ್ಸ್ ಜಾಲದಲ್ಲಿ ಮಂಗಳೂರು ನಂಟಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ತಪಾಸಣೆ, ತನಿಖೆ, ಜಾಗೃತಿ ಕಾರ್ಯ ಗಳನ್ನು ತೀವ್ರ ಗೊಳಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>