ನಗರದಲ್ಲಿ ಸ್ವಚ್ಛ ಪರಿಸರ ಹೊಂದುವುದಕ್ಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಅವರು ತಿಳಿಸಿದರು.
ಉಪಮೇಯರ್ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಸಂಧ್ಯಾ ಮೋಹನ ಆಚಾರ್ಯ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಸಭಾಪತಿ ಶಾಂತಾರಾಮ ಶೆಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಇನ್ನರ್ ವೀಲ್ ಕ್ಲಬ್ನ ಮಂಗಳೂರು ಉತ್ತರ ಘಟಕದ ಅಧ್ಯಕ್ಷೆ ವಸಂತಿ ಕಾಮತ್, ಎನ್ಐಟಿಕೆಯ ದೈಹಿಕ ನಿರ್ದೇಶಕ ಶಿವರಾಂ ಮೊದಲಾದವರು ಇದ್ದರು.