ಮಧ್ಯಾಹ್ನ 3.30ಕ್ಕೆ ಸಮಾವೇಶವನ್ನು ನಾರಾಯಣ ಅವರು ಉದ್ಘಾಟಿಸಲಿದ್ದು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಉಪಮೇಯರ್ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್, ನವೀನ್ ಡಿಸೋಜಾ, ನಿವೃತ್ತ ಜಿಲ್ಲಾಧಿಕಾರಿಗಳಾದ ಎ.ಬಿ.ಇಬ್ರಾಹಿಂ, ಶಶಿಕಾಂತ ಸೆಂಥಿಲ್, ಸಿಇಡಿಎಸ್ಇ ನಿರ್ದೇಶಕಿ ರೀಟಾ ನೊರೊನ್ಹಾ, ಪೌರಕಾರ್ಮಿಕರ ಸಂಘದ ಉಪಾಧ್ಯಕ್ಷ ಕಾಂತಪ್ಪ ಅಲಂಗಾರು ಮತ್ತಿತರರು ಪಾಲ್ಗೊಳ್ಳುವರು ಎಂದು ಅವರು ವಿವರಿಸಿದರು.