ಜ.28ರಂದು ಬೆಳಿಗ್ಗೆ 8.10ಕ್ಕೆ ಕುಂಭ ಲಗ್ನ ಸುಮೂರ್ತದಲ್ಲಿ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಅಂದು 25 ಸಾವಿರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆ ಇದ್ದು, ಅದಕ್ಕಾಗಿ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ದೇವರ ದರ್ಶನ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸೇವೆಯನ್ನು ನೀಡಿದವರಿಗೆ ಗೌರವ ಸಹಿತ ದೇವಳಕ್ಕೆ ಬರುವ ಭಕ್ತರಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನಾನಿಲ್ ತಿಳಿಸಿದ್ದಾರೆ.