ಉಳ್ಳಾಲ: ಪಿಎಚ್ಡಿ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಘಟನೆ ನಡೆದ ವಾರದ ಬಳಿಕ ಫೆ.24ರಂದು ವಿದ್ಯಾರ್ಥಿನಿ ಬಳಸುತ್ತಿದ್ದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ. ಪುತ್ತೂರು ಮೂಲದ ಶಾರೂಕ್ ಎಂಬಾತ ವಿದ್ಯಾರ್ಥಿನಿಯನ್ನು ಅಪಹರಿಸಿರುವ ಸಾಧ್ಯತೆ ಇದ್ದು, ಆತನನ್ನು ಬಂಧಿಸಬೇಕು ಎಂದು ಬಜರಂಗದಳ ಒತ್ತಾಯಿಸಿದೆ.