ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿ ನೀರಲ್ಲಿ ಮುಳುಗಿದ ಪಿಕಪ್ ವಾಹನ: ಚಾಲಕ‌ ಸೇರಿ ಇಬ್ಬರ ರಕ್ಷಣೆ

Last Updated 25 ಮೇ 2021, 17:21 IST
ಅಕ್ಷರ ಗಾತ್ರ

ಉಜಿರೆ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಮಂಗಳವಾರ ಸಂಜೆ ಮೃತ್ಯುಂಜಯ ನದಿಯಲ್ಲಿ ಒಮ್ಮೆಲೆ ನೆರೆನೀರು ಉಕ್ಕಿಬಂದು ಪಿಕಪ್ ವಾಹನ ನೀರಿನಲ್ಲಿ ಮುಳುಗಿತ್ತು.

ಅಳದಂಗಡಿಯ ಸದಾನಂದ ಅವರ ಪಿಕಪ್ ವಾಹನದಲ್ಲಿ ದಯಾನಂದ ಅವರ ಮನೆಗೆ ಸೆಂಟ್ರಿಂಗ್ ಪರಿಕರಗಳನ್ನು ಕೊಟ್ಟು ಹಿಂದೆ ಬರುವಾಗ ಈ ಘಟನೆ ನಡೆದಿದೆ. ವಾಹನ ನದಿಗೆ ಇಳಿಯುತ್ತಿದ್ದಂತೆ, ಒಮ್ಮೆಲೆ ನೀರು ಉಕ್ಕಿ ಬಂತು.

ಪಿಕಪ್‌ನಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿದರು. ವಾಹನಕ್ಕೆ ಹಗ್ಗದಿಂದ ಕಟ್ಟಿ ನೀರು ಪಾಲಾಗದಂತೆ ತಡೆದರು. ಬಳಿಕ ಸ್ಥಳೀಯರೆಲ್ಲಾ ಸೇರಿ ವಾಹನವನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಕಕ್ಕಿಂಜೆಯ ವಿಕಾಯ ತಂಡ ಮತ್ತು ಮುಸ್ಲಿಮ್ ಯುವಕರ ತಂಡದ ಸದಸ್ಯರು ಪಿಕಪ್ ವಾಹನವನ್ನು ನದಿಯಿಂದ ಮೇಲೆತ್ತುವಲ್ಲಿಸಹಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT