ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಅನಿವಾಸಿ ಭಾರತೀಯರನ್ನು ತಾಯ್ನಾಡಿಗೆ ಮರಳಿ ಕರೆಸುವ ಕೇಂದ್ರ ಸರ್ಕಾರದ ಯೋಜನೆ ಮೊದಲ ಕಂತಿನಲ್ಲಿ (ಮೇ7ರಿಂದ 14) ಅನಿವಾಸಿ ಕನ್ನಡಿಗರನ್ನು ಪರಿಗಣಿಸಿಲ್ಲ. ಇದರಿಂದಾಗಿ ಸಾವಿರಾರು ಅನಿವಾಸಿ ಕನ್ನಡಿಗರು ಆತಂಕಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಬೇಕು’ ಎಂದು ಅವರು ವಿನಂತಿಸಿದ್ದಾರೆ.