ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಮೂಲಕ ಬಡವರ ಹಸಿವು ನೀಗಿಸುವ, ಜನಸಾಮಾನ್ಯರಿಗೆ ಶಕ್ತಿ ನೀಡುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಬಿಜೆಪಿ ಹಿಂದುತ್ವದ ಕಾರ್ಯಸೂಚಿಯೊಂದಿಗೆ ಚುನಾವಣೆ ಎದುರಿಸುತ್ತಿದೆ. ಹಿಂದುತ್ವದ ಪ್ರತಿಪಾದನೆ ಸುಲಭ. ಆದರೆ, ಬಡವರಿಗೆ ಸ್ಪಂದಿಸುವುದು ಕಷ್ಟ ಎಂದರು.