<p>ಪುತ್ತೂರು: ತನ್ನ ತಾತ, ಅಜ್ಜಿ, ಮಾವ, ಅಪ್ಪ, ಅಮ್ಮ ನೀಡಿದ್ದ ಪಾಕೆಟ್ ಮನಿಯನ್ನು ಕೂಡಿಟ್ಟಿದ್ದ ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳು ಅದನ್ನು ತನ್ನ ಜನ್ಮದಿನದ ಸಂದರ್ಭದಲ್ಲಿ ಬಡರೋಗಿಗಳ ಚಿಕಿತ್ಸೆಗಾಗಿ ನೀಡಿದ್ದಾಳೆ.</p>.<p>‘ವೈದ್ಯರ ದಿನ’ವಾದ ಗುರುವಾರ ಪುತ್ತೂರಿನ ಆದರ್ಶ ಆಸ್ಪತ್ರೆಯ ಡಾ.ಎಂ.ಕೆ.ಪ್ರಸಾದ್ ಅವರಿಗೆ ₹ 10 ಸಾವಿರದಷ್ಟು ಹಣ ನೀಡುವ ಮಾಡುವ ಮೂಲಕ ಜನ್ಮದಿನವನ್ನು ಪುತ್ತೂರಿನ ದಿಶಾ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾಳೆ.</p>.<p>ಯಕ್ಷಗಾನ ಕಲಾವಿದರಾಗಿದ್ದ ಬನ್ನೂರಿನ ದಿವಂಗತ ಶ್ರೀಧರ್ ಭಂಡಾರಿ ಅವರ ಮೊಮ್ಮಗಳು, ಪುತ್ತೂರಿನ ನೆಹರೂನಗರದ ವಿವೇಕಾನಂದ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾದ ದಿಶಾ, ಉದ್ಯಮಿ ದೀಪಕ್ ಶೆಟ್ಟಿ ಮತ್ತು ಪ್ರಧಾನಮಂತ್ರಿ ಜನೌಷಧಿ ಯೋಜನೆಯ ರಾಜ್ಯ ನೋಡಲ್ ಅಧಿಕಾರಿ ಡಾ.ಅನಿಲಾ ದಂಪತಿಯ ಪುತ್ರಿ.</p>.<p>ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಡ ರೋಗಿಗಳು ಔಷಧಿ ವೆಚ್ಚ ಭರಿಸಲು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳನ್ನು ಪತ್ರಿಕೆ, ಮಾಧ್ಯಮಗಳ ಮೂಲಕ ಅರಿತಿದ್ದ ದಿಶಾ, ಬಡರೋಗಿಗಳಿಗೆ ಒಂದಿಷ್ಟಾದರೂ ನೆರೆವಾಗಲೆಂದು ತಾನು ಕೂಡಿಟ್ಟಿದ್ದ ಹಣವನ್ನು ಡಾ.ಎಂ.ಕೆ.ಪ್ರಸಾದ್ ಅವರಿಗೆ ಹಸ್ತಾಂತರಿಸಿದ್ದಾಳೆ. ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿ ವೈದ್ಯರಿಗೆ ಶುಭಾಶಯವನ್ನೂ ತಿಳಿಸಿದ್ದಾಳೆ.</p>.<p>‘ಇವತ್ತು ನನ್ನ ಜನ್ಮದಿನ. ಆದರೆ, ಅದ್ಧೂರಿಯಾಗಿ ಆಚರಣೆ ಮಾಡಿಲ್ಲ. ತಾನು ಕೂಡಿಟ್ಟಿದ್ದ ಹಣದ ಪೊಟ್ಟಣವನ್ನು ವೈದ್ಯರಿಗೆ ನೀಡಿ, ಆ ಹಣದಲ್ಲಿ ಬಡ ರೋಗಿಗಳಿಗೆ ಚಿಕಿತ್ಸೆ ಕೊಡಿಸುವಂತೆ ಕೇಳಿಕೊಂಡಿದ್ದೇನೆ’ ಎಂದಳು ದಿಶಾ</p>.<p>ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ, ಲಕ್ಷ್ಮೀಪ್ರಸಾದ್ ಬೊಟ್ಯಾಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ತನ್ನ ತಾತ, ಅಜ್ಜಿ, ಮಾವ, ಅಪ್ಪ, ಅಮ್ಮ ನೀಡಿದ್ದ ಪಾಕೆಟ್ ಮನಿಯನ್ನು ಕೂಡಿಟ್ಟಿದ್ದ ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳು ಅದನ್ನು ತನ್ನ ಜನ್ಮದಿನದ ಸಂದರ್ಭದಲ್ಲಿ ಬಡರೋಗಿಗಳ ಚಿಕಿತ್ಸೆಗಾಗಿ ನೀಡಿದ್ದಾಳೆ.</p>.<p>‘ವೈದ್ಯರ ದಿನ’ವಾದ ಗುರುವಾರ ಪುತ್ತೂರಿನ ಆದರ್ಶ ಆಸ್ಪತ್ರೆಯ ಡಾ.ಎಂ.ಕೆ.ಪ್ರಸಾದ್ ಅವರಿಗೆ ₹ 10 ಸಾವಿರದಷ್ಟು ಹಣ ನೀಡುವ ಮಾಡುವ ಮೂಲಕ ಜನ್ಮದಿನವನ್ನು ಪುತ್ತೂರಿನ ದಿಶಾ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾಳೆ.</p>.<p>ಯಕ್ಷಗಾನ ಕಲಾವಿದರಾಗಿದ್ದ ಬನ್ನೂರಿನ ದಿವಂಗತ ಶ್ರೀಧರ್ ಭಂಡಾರಿ ಅವರ ಮೊಮ್ಮಗಳು, ಪುತ್ತೂರಿನ ನೆಹರೂನಗರದ ವಿವೇಕಾನಂದ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾದ ದಿಶಾ, ಉದ್ಯಮಿ ದೀಪಕ್ ಶೆಟ್ಟಿ ಮತ್ತು ಪ್ರಧಾನಮಂತ್ರಿ ಜನೌಷಧಿ ಯೋಜನೆಯ ರಾಜ್ಯ ನೋಡಲ್ ಅಧಿಕಾರಿ ಡಾ.ಅನಿಲಾ ದಂಪತಿಯ ಪುತ್ರಿ.</p>.<p>ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಡ ರೋಗಿಗಳು ಔಷಧಿ ವೆಚ್ಚ ಭರಿಸಲು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳನ್ನು ಪತ್ರಿಕೆ, ಮಾಧ್ಯಮಗಳ ಮೂಲಕ ಅರಿತಿದ್ದ ದಿಶಾ, ಬಡರೋಗಿಗಳಿಗೆ ಒಂದಿಷ್ಟಾದರೂ ನೆರೆವಾಗಲೆಂದು ತಾನು ಕೂಡಿಟ್ಟಿದ್ದ ಹಣವನ್ನು ಡಾ.ಎಂ.ಕೆ.ಪ್ರಸಾದ್ ಅವರಿಗೆ ಹಸ್ತಾಂತರಿಸಿದ್ದಾಳೆ. ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿ ವೈದ್ಯರಿಗೆ ಶುಭಾಶಯವನ್ನೂ ತಿಳಿಸಿದ್ದಾಳೆ.</p>.<p>‘ಇವತ್ತು ನನ್ನ ಜನ್ಮದಿನ. ಆದರೆ, ಅದ್ಧೂರಿಯಾಗಿ ಆಚರಣೆ ಮಾಡಿಲ್ಲ. ತಾನು ಕೂಡಿಟ್ಟಿದ್ದ ಹಣದ ಪೊಟ್ಟಣವನ್ನು ವೈದ್ಯರಿಗೆ ನೀಡಿ, ಆ ಹಣದಲ್ಲಿ ಬಡ ರೋಗಿಗಳಿಗೆ ಚಿಕಿತ್ಸೆ ಕೊಡಿಸುವಂತೆ ಕೇಳಿಕೊಂಡಿದ್ದೇನೆ’ ಎಂದಳು ದಿಶಾ</p>.<p>ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ, ಲಕ್ಷ್ಮೀಪ್ರಸಾದ್ ಬೊಟ್ಯಾಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>