ಸಿಜೆಎಂ ನ್ಯಾಯಾಧೀಶ ಮುಜೀಬ್ ರಹಮಾನ್ ಮಾಹಿತಿ ನೀಡಿದರು. ನ್ಯಾಯಾಧೀಶ ಜತೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ದೇವಿದಾಸ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಪಿ.ಶ್ಯಾಮಲಾದೇವಿ, ಕಾಸರಗೋಡು ವಕೀಲರ ಸಂಘದ ಅಧ್ಯಕ್ಷ ಎ.ಸಿ.ಅಶೋಕ್ ಕುಮಾರ್, ಅಬಕಾರಿ ವಿಶೇಷದಳ ಸಿ.ಐ.ಪಿ.ಪಿ.ಜನಾರ್ದನನ್, ಜಿಲ್ಲಾಮಕ್ಕಳ ಸಂರಕ್ಷಣೆ ಅಧಿಕಾರಿ ಸಿ.ಎ.ಬಿಂದು, ಚೈಲ್ಡ್ ಲೈನ್ ಕೌನ್ಸಿಲರ್ ಆಯಿಷತ್ ಅಫೀದ,ಡಿ.ಎಲ್.ಎಸ್.ಎ. ವಿಭಾಗ ಅಧಿಕಾರಿ ಕೆ.ದಿನೇಶ, ಪ್ರಾಂಶುಪಾಲ ಪುಷ್ಪರಾಜ್ ಉಪಸ್ಥಿತರಿದ್ದರು.