<p><strong>ಮಂಗಳೂರು</strong>: ಬಂಡಾಯ ಸಾಹಿತಿ, ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ನಷ್ಟ ಎಂದು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮಾಂತರ ಪ್ರದೇಶದ ಊರು ಕೇರಿಗಳ ಮುಖವಾಣಿಯಾಗಿ ತಮ್ಮ ಕವಿತೆ ಹಾಗೂ ಗದ್ಯ ಸಾಹಿತ್ಯಗಳಿಂದ ದೀನ- ದಲಿತರನ್ನು ಮುಖ್ಯ ವಾಹಿನಿಗೆ ತರುವ ಪ್ರಯತ್ನ ಅನುಕರಣೀಯ , ಇವರ ಉದಾತ್ತ ಗುಣವನ್ನು ಮರೆಯುವುದು ಅಸಾಧ್ಯ ಎಂದಿದ್ದಾರೆ.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರೊಂದಿಗೆ ಪ್ರಾಧಿಕಾರದ ಸದಸ್ಯನಾಗಿ ನಿಕಟ ಸಂಪರ್ಕವನ್ನು ಹೊಂದಿದ್ದು ಪ್ರಮುಖವಾಗಿ ಕಾಸರಗೋಡಿನ ಕನ್ನಡಿಗರಿಗೆ , ಕರ್ನಾಟಕದಲ್ಲಿನ ಕನ್ನಡಿಗರಿಗೆ ಲಭಿಸುವ ಸೌಲಭ್ಯಗಳು ಲಭ್ಯವಾಗುವಂತಹ ಅನೇಕ ನಿರ್ಣಯಗಳನ್ನು ಕೈಗೊಂಡಿರುವ ಕ್ರಮ, ಮಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಅಖಿಲ ಭಾರತ ಪುಸ್ತಕ ಮೇಳದ ಯಶಸ್ಸಿನಲ್ಲೂ ಸಿದ್ಧಲಿಂಗಯ್ಯ ನವರ ಕ್ಷಮತೆಯನ್ನು ಕೊಂಡಾಡಿದ್ದಾರೆ ಎಂದಿದ್ದಾರೆ.</p>.<p>ಪ್ರಮುಖರಾದ ಹರಿಕೃಷ್ಣ ಪುನರೂರು, ಡಾ.ಎಂ.ಪ್ರಭಾಕರ ಜೋಶಿ, ನಿತ್ಯಾನಂದ ಕಾರಂತ ಪೊಳಲಿ, ಜಿ.ಕೆ.ಭಟ್ ಸೇರಾಜೆ ಮೊದಲಾದವರೂ ಸಿದ್ಧಲಿಂಗಯ್ಯ ಅವರ ನಿಧನಕ್ಕೆ ನುಡಿನಮನ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಂಡಾಯ ಸಾಹಿತಿ, ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ನಷ್ಟ ಎಂದು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಂತಾಪ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮಾಂತರ ಪ್ರದೇಶದ ಊರು ಕೇರಿಗಳ ಮುಖವಾಣಿಯಾಗಿ ತಮ್ಮ ಕವಿತೆ ಹಾಗೂ ಗದ್ಯ ಸಾಹಿತ್ಯಗಳಿಂದ ದೀನ- ದಲಿತರನ್ನು ಮುಖ್ಯ ವಾಹಿನಿಗೆ ತರುವ ಪ್ರಯತ್ನ ಅನುಕರಣೀಯ , ಇವರ ಉದಾತ್ತ ಗುಣವನ್ನು ಮರೆಯುವುದು ಅಸಾಧ್ಯ ಎಂದಿದ್ದಾರೆ.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರೊಂದಿಗೆ ಪ್ರಾಧಿಕಾರದ ಸದಸ್ಯನಾಗಿ ನಿಕಟ ಸಂಪರ್ಕವನ್ನು ಹೊಂದಿದ್ದು ಪ್ರಮುಖವಾಗಿ ಕಾಸರಗೋಡಿನ ಕನ್ನಡಿಗರಿಗೆ , ಕರ್ನಾಟಕದಲ್ಲಿನ ಕನ್ನಡಿಗರಿಗೆ ಲಭಿಸುವ ಸೌಲಭ್ಯಗಳು ಲಭ್ಯವಾಗುವಂತಹ ಅನೇಕ ನಿರ್ಣಯಗಳನ್ನು ಕೈಗೊಂಡಿರುವ ಕ್ರಮ, ಮಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಅಖಿಲ ಭಾರತ ಪುಸ್ತಕ ಮೇಳದ ಯಶಸ್ಸಿನಲ್ಲೂ ಸಿದ್ಧಲಿಂಗಯ್ಯ ನವರ ಕ್ಷಮತೆಯನ್ನು ಕೊಂಡಾಡಿದ್ದಾರೆ ಎಂದಿದ್ದಾರೆ.</p>.<p>ಪ್ರಮುಖರಾದ ಹರಿಕೃಷ್ಣ ಪುನರೂರು, ಡಾ.ಎಂ.ಪ್ರಭಾಕರ ಜೋಶಿ, ನಿತ್ಯಾನಂದ ಕಾರಂತ ಪೊಳಲಿ, ಜಿ.ಕೆ.ಭಟ್ ಸೇರಾಜೆ ಮೊದಲಾದವರೂ ಸಿದ್ಧಲಿಂಗಯ್ಯ ಅವರ ನಿಧನಕ್ಕೆ ನುಡಿನಮನ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>