ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವ ಸಿವಿಲ್ ವ್ಯಾಜ್ಯವೊಂದರಲ್ಲಿ ಪ್ರತಿವಾದಿ ವಿರುದ್ಧ ಪ್ರತಿಬಂಧಕಾಜ್ಞೆ ಇದ್ದರೂ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ರಾತ್ರಿ ವೇಳೆ ಮನೆಗೆ ಪ್ರವೇಶ ಮಾಡಿ ಅವರನ್ನು ಎಳೆದುಕೊಂಡು ಹೋಗುವ ಮೂಲಕ ಪೊಲೀಸರು ದೌರ್ಜನ್ಯ ನಡೆಸಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.