<p><strong>ಮಂಗಳೂರು:</strong> ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಜನರಿಗೆ ಮನವಿ ಮಾಡಿದರು.</p>.<p>ಸಾಮಾಜಿಕ ಜಾಲತಾಣದಲ್ಲಿ ಲೈವ್ ಕಾರ್ಯಕ್ರಮದ ಮೂಲಕ ಭಾನುವಾರ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಮಂಗಳೂರಿನಲ್ಲಿ ಜನರು ಸೂಕ್ಷ್ಮವಾಗಿದ್ದು, ಶೇ 99 ರಷ್ಟು ಜನರು ಮಾರ್ಗಸೂಚಿ ಅನುಸರಿಸುತ್ತಿದ್ದಾರೆ. ಜನರು ಮಾರ್ಗಸೂಚಿಗಳ ಉಲ್ಲಂಘನೆ ಮಾಡಿದಾಗ ನಾವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದರು.</p>.<p>‘ನಾವು ಸಾರ್ವಜನಿಕರ ಮೇಲೆ ಯಾವುದೇ ಒತ್ತಡವನ್ನು ಹೇರಿಲ್ಲ. ಕೆಲವೊಮ್ಮೆ ಸಾರ್ವಜನಿಕರ ಗುಂಪನ್ನು ಚದುರಿಸಲು ಅಥವಾ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಇಲಾಖೆಯು ಕನಿಷ್ಠ ಬಲವನ್ನು ಪ್ರಯೋಗ ಮಾಡಬೇಕಾಗುತ್ತದೆ’ ಎಂದರು.</p>.<p>ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬರುವವರು ತಮ್ಮ ಟಿಕೆಟ್ಗಳನ್ನು ತೋರಿಸಿ ಪ್ರಯಾಣಿಸಬಹುದು. ವಿನಾಃಕಾರಣ ನಿಯಮ ಉಲ್ಲಂಘನೆಯಾದ ಸಂದರ್ಭದಲ್ಲಿ, ನಾವು ಪ್ರಕರಣ ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದೇವೆ'' ಎಂದು ತಿಳಿಸಿದರು.</p>.<p>ಲಸಿಕೆ ಹಾಕಿಸಿಕೊಳ್ಳುವವರಿಗೆ ಅನುಕೂಲ ಮಾಡಿಕೊಡಿ ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಅವರು, ‘ವೈದ್ಯಕೀಯ ಚಿಕಿತ್ಸೆ ಹಾಗೂ ಲಸಿಕೆ ಪಡೆಯಲು ಹಿರಿಯ ನಾಗರಿಕರಿಗೆ ಇಲಾಖೆಯ ವಾಹನಗಳನ್ನು ಬಳಸಿಕೊಂಡು ಪೊಲೀಸ್ ಸಿಬ್ಬಂದಿ ಸಹಾಯ ಮಾಡಿದ ಉದಾಹರಣೆಗಳಿವೆ’ ಎಂದು ಹೇಳಿದರು.</p>.<p>ಬೆಂಗಳೂರಿನಿಂದ ಮಂಗಳೂರಿಗೆ ಬರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ‘ನಿಜವಾದ ಕಾರಣವಾಗಿದ್ದರೆ, ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಯಾವುದೇ ಕಾರಣವಿಲ್ಲದೇ ಪ್ರಯಾಣಿಸಿದರೆ ಪ್ರಕರಣ ದಾಖಲು ಮಾಡಿ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.</p>.<p>ಗೃಹರಕ್ಷಕರನ್ನು ನಿಯೋಜಿಸುವ ಕುರಿತು ಕೆಲ ಸರ್ವಜನಿಕರು ಸಲಹೆ ನೀಡಿದ್ದು, ‘ನಾವು ನಗರದಲ್ಲಿ 150 ಗೃಹರಕ್ಷಕರನ್ನು ನಿಯೋಜಿಸಿದ್ದೇವೆ. 75 ಹೆಚ್ಚುವರಿ ಗೃಹರಕ್ಷಕರನ್ನು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದೇವೆ’ ಎಂದರು.</p>.<p>ಯಾವುದೇ ಸಂಸ್ಥೆ, ಪಕ್ಷಗಳು ತಮ್ಮದೇ ಆದ ಪಾಸ್ಗಳೊಂದಿಗೆ ಸಂಚರಿಸುವುದನ್ನು ನಿಷೇಧಿಸಲಾಗಿದೆ’ ಎಂದ ಅವರು, ‘ಮಾನವೀಯ ನೆಲೆಯಲ್ಲಿ ಅಶಕ್ತರಿಗೆ ಸಹಾಯ ಮಾಡಲು ಯಾವುದೇ ಅಡ್ಡಿ ಮಾಡುವುದಿಲ್ಲ’ ಎಂದರು.</p>.<p class="Briefhead">‘20 ಹಾಸಿಗೆ ಆರೈಕೆ ಕೇಂದ್ರ’</p>.<p>ಕೋವಿಡ್ ಲಕ್ಷಣಗಳಿದ್ದು, ಪ್ರತ್ಯೇಕವಾಗಿ ಇರಲು ಬಯಸುವ ಪೊಲೀಸ್ ಸಿಬ್ಬಂದಿಗಾಗಿ 20 ಹಾಸಿಗೆಯ ಕೋವಿಡ್ ಆರೈಕೆ ಕೇಂದ್ರವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.</p>.<p>ಈಗಾಗಲೇ ಕಮಿಷನರೇಟ್ ವ್ಯಾಪ್ತಿಯ 48 ಪೊಲೀಸರಿಗೆ ಕೋವಿಡ್ ದೃಢವಾಗಿದೆ. ಆ ಪೈಕಿ ಏಳು ಜನರು ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶೇ 95 ರಷ್ಟು ಪೊಲೀಸ್ ಸಿಬ್ಬಂದಿಗೆ ಮೊದಲ ಡೋಸ್ ಹಾಗೂ ಶೇ 80 ರಷ್ಟು ಸಿಬ್ಬಂದಿಗೆ ಎರಡನೇ ಡೋಸ್ ಲಸಿಕೆ ಹಾಕಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಜನರಿಗೆ ಮನವಿ ಮಾಡಿದರು.</p>.<p>ಸಾಮಾಜಿಕ ಜಾಲತಾಣದಲ್ಲಿ ಲೈವ್ ಕಾರ್ಯಕ್ರಮದ ಮೂಲಕ ಭಾನುವಾರ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಮಂಗಳೂರಿನಲ್ಲಿ ಜನರು ಸೂಕ್ಷ್ಮವಾಗಿದ್ದು, ಶೇ 99 ರಷ್ಟು ಜನರು ಮಾರ್ಗಸೂಚಿ ಅನುಸರಿಸುತ್ತಿದ್ದಾರೆ. ಜನರು ಮಾರ್ಗಸೂಚಿಗಳ ಉಲ್ಲಂಘನೆ ಮಾಡಿದಾಗ ನಾವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದರು.</p>.<p>‘ನಾವು ಸಾರ್ವಜನಿಕರ ಮೇಲೆ ಯಾವುದೇ ಒತ್ತಡವನ್ನು ಹೇರಿಲ್ಲ. ಕೆಲವೊಮ್ಮೆ ಸಾರ್ವಜನಿಕರ ಗುಂಪನ್ನು ಚದುರಿಸಲು ಅಥವಾ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಇಲಾಖೆಯು ಕನಿಷ್ಠ ಬಲವನ್ನು ಪ್ರಯೋಗ ಮಾಡಬೇಕಾಗುತ್ತದೆ’ ಎಂದರು.</p>.<p>ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬರುವವರು ತಮ್ಮ ಟಿಕೆಟ್ಗಳನ್ನು ತೋರಿಸಿ ಪ್ರಯಾಣಿಸಬಹುದು. ವಿನಾಃಕಾರಣ ನಿಯಮ ಉಲ್ಲಂಘನೆಯಾದ ಸಂದರ್ಭದಲ್ಲಿ, ನಾವು ಪ್ರಕರಣ ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದೇವೆ'' ಎಂದು ತಿಳಿಸಿದರು.</p>.<p>ಲಸಿಕೆ ಹಾಕಿಸಿಕೊಳ್ಳುವವರಿಗೆ ಅನುಕೂಲ ಮಾಡಿಕೊಡಿ ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಅವರು, ‘ವೈದ್ಯಕೀಯ ಚಿಕಿತ್ಸೆ ಹಾಗೂ ಲಸಿಕೆ ಪಡೆಯಲು ಹಿರಿಯ ನಾಗರಿಕರಿಗೆ ಇಲಾಖೆಯ ವಾಹನಗಳನ್ನು ಬಳಸಿಕೊಂಡು ಪೊಲೀಸ್ ಸಿಬ್ಬಂದಿ ಸಹಾಯ ಮಾಡಿದ ಉದಾಹರಣೆಗಳಿವೆ’ ಎಂದು ಹೇಳಿದರು.</p>.<p>ಬೆಂಗಳೂರಿನಿಂದ ಮಂಗಳೂರಿಗೆ ಬರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ‘ನಿಜವಾದ ಕಾರಣವಾಗಿದ್ದರೆ, ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಯಾವುದೇ ಕಾರಣವಿಲ್ಲದೇ ಪ್ರಯಾಣಿಸಿದರೆ ಪ್ರಕರಣ ದಾಖಲು ಮಾಡಿ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.</p>.<p>ಗೃಹರಕ್ಷಕರನ್ನು ನಿಯೋಜಿಸುವ ಕುರಿತು ಕೆಲ ಸರ್ವಜನಿಕರು ಸಲಹೆ ನೀಡಿದ್ದು, ‘ನಾವು ನಗರದಲ್ಲಿ 150 ಗೃಹರಕ್ಷಕರನ್ನು ನಿಯೋಜಿಸಿದ್ದೇವೆ. 75 ಹೆಚ್ಚುವರಿ ಗೃಹರಕ್ಷಕರನ್ನು ಒದಗಿಸುವಂತೆ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದೇವೆ’ ಎಂದರು.</p>.<p>ಯಾವುದೇ ಸಂಸ್ಥೆ, ಪಕ್ಷಗಳು ತಮ್ಮದೇ ಆದ ಪಾಸ್ಗಳೊಂದಿಗೆ ಸಂಚರಿಸುವುದನ್ನು ನಿಷೇಧಿಸಲಾಗಿದೆ’ ಎಂದ ಅವರು, ‘ಮಾನವೀಯ ನೆಲೆಯಲ್ಲಿ ಅಶಕ್ತರಿಗೆ ಸಹಾಯ ಮಾಡಲು ಯಾವುದೇ ಅಡ್ಡಿ ಮಾಡುವುದಿಲ್ಲ’ ಎಂದರು.</p>.<p class="Briefhead">‘20 ಹಾಸಿಗೆ ಆರೈಕೆ ಕೇಂದ್ರ’</p>.<p>ಕೋವಿಡ್ ಲಕ್ಷಣಗಳಿದ್ದು, ಪ್ರತ್ಯೇಕವಾಗಿ ಇರಲು ಬಯಸುವ ಪೊಲೀಸ್ ಸಿಬ್ಬಂದಿಗಾಗಿ 20 ಹಾಸಿಗೆಯ ಕೋವಿಡ್ ಆರೈಕೆ ಕೇಂದ್ರವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು.</p>.<p>ಈಗಾಗಲೇ ಕಮಿಷನರೇಟ್ ವ್ಯಾಪ್ತಿಯ 48 ಪೊಲೀಸರಿಗೆ ಕೋವಿಡ್ ದೃಢವಾಗಿದೆ. ಆ ಪೈಕಿ ಏಳು ಜನರು ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶೇ 95 ರಷ್ಟು ಪೊಲೀಸ್ ಸಿಬ್ಬಂದಿಗೆ ಮೊದಲ ಡೋಸ್ ಹಾಗೂ ಶೇ 80 ರಷ್ಟು ಸಿಬ್ಬಂದಿಗೆ ಎರಡನೇ ಡೋಸ್ ಲಸಿಕೆ ಹಾಕಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>