‘ಲಾಕ್ಡೌನ್ ನಿಯಮದನ್ವಯ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಂದಿನ ಒಂದು ವಾರ ನಿರಂತರ ವಾಹನ ತಪಾಸಣೆ ನಡೆಯಲಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಭಾಗದಲ್ಲಿ ದಾಖಲೆ ರಹಿತ ಅನಗತ್ಯ ವಾಹನ ಸಂಚಾರಕ್ಕೆ ದಂಡ ವಿಧಿಸಿ, ವಾಹನ ವಶಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಡಾ.ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.